Publish Date: Fri, 19 Aug 2022 (10:48 IST)
Updated Date: Fri, 19 Aug 2022 (10:49 IST)
ಬೆಂಗಳೂರು : ಎರಡು ವರ್ಷಗಳ ಕೊರೊನಾ ಶೈಕ್ಷಣಿಕ ಕ್ಷೇತ್ರಕ್ಕೆ ದೊಡ್ಡ ಹೊಡೆತ ಕೊಟ್ಟಿತ್ತು. ಈಗ ಕೊರೊನಾ ಎಫೆಕ್ಟ್ ಕಡಿಮೆ ಆಗುತ್ತಲೇ ಅದರ ಪರಿಣಾಮಗಳು ಶಿಕ್ಷಣ ಕ್ಷೇತ್ರದ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತಿವೆ.
ಕೊರೊನಾದಿಂದಾಗಿ ರಾಜ್ಯದಲ್ಲಿ ಸಾವಿರಾರು ಮಕ್ಕಳು ಶಾಲೆಯಿಂದ ದೂರ ಉಳಿದಿರುವ ಆಘಾತಕಾರಿ ಅಂಶ ಈಗ ಬಯಲಾಗಿದೆ. ಶಿಕ್ಷಣ ಇಲಾಖೆಯ ಅಂಕಿ ಅಂಶಗಳಲ್ಲಿ ಕೆಲವೊಂದು ಆಘಾತಕಾರಿ ಅಂಶ ಹೊರಬಿದ್ದಿದೆ.
ಹೈಕೋರ್ಟ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಆಪರೇಷನ್ ಡ್ರಾಪ್ ಔಟ್ ಚಿಲ್ಡ್ರನ್ಸ್ ಅಭಿಯಾನ ಪ್ರಾರಂಭ ಮಾಡಿದೆ. ಮಕ್ಕಳನ್ನ ಶಾಲೆಗೆ ವಾಪಸ್ ಕರೆತರಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವಿಶೇಷ ಟಾಸ್ಕ್ ನೀಡಲಾಗಿದೆ.
ಶಾಲೆ ಬಿಟ್ಟ ಮಕ್ಕಳ ರಿಪೋರ್ಟ್: ಈ ವರ್ಷ 24,308 ವಿದ್ಯಾರ್ಥಿಗಳು ಶಾಲೆಯಿಂದ ಡ್ರಾಪ್ ಔಟ್ ಆಗಿದ್ದಾರೆ. ಈವರೆಗೂ 18,584 ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆ ಪತ್ತೆಹಚ್ಚಿದೆ. ಇನ್ನು 5,724 ವಿದ್ಯಾರ್ಥಿಗಳ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಇಲ್ಲ.