Select Your Language

Notifications

webdunia
webdunia
webdunia
webdunia

ವಿಧಾನಸೌಧದೊಳಗೆ ಮತ್ತೆ ಚುನಾವಣೆ ಗಡಿಬಿಡಿ!

ವಿಧಾನಸೌಧದೊಳಗೆ ಮತ್ತೆ ಚುನಾವಣೆ ಗಡಿಬಿಡಿ!
ಬೆಂಗಳೂರು , ಗುರುವಾರ, 24 ಮೇ 2018 (09:56 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಕಳೆದಿದೆ. ಇದ್ಯಾವ ಚುನಾವಣೆ ಎಂದುಕೊಳ್ಳಬೇಡಿ. ನೂತನವಾಗಿ ಸರ್ಕಾರವೇನೋ ರಚನೆಯಾಗಿದೆ. ಆದರೆ ಇದೀಗ ಸ್ಪೀಕರ್ ಆಯ್ಕೆ ನಡೆಯಬೇಕಿದೆ.

ಈಗಾಗಲೇ ಸಮ್ಮಿಶ್ರ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಆರ್ ರಮೇಶ್ ಕುಮಾರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಇದೀಗ ಬಿಜೆಪಿ ಕೂಡಾ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಶಾಸಕ ಸುರೇಶ್ ಕುಮಾರ್ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಹೆಚ್ಚು ಮತ ಪಡೆದವರು ಸ್ಪೀಕರ್ ಆಗಿ ಮುಂದಿನ ಐದು ವರ್ಷಗಳಿಗೆ ಆಯ್ಕೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಿಪಾಹ್ ವೈರಸ್ ಜತೆಗೇ ಕರಾವಳಿ ಪ್ರದೇಶಕ್ಕೆ ಮತ್ತೊಂದು ಅಪಾಯ!