Select Your Language

Notifications

webdunia
webdunia
webdunia
webdunia

ಮಿತಿ ಮೀರುತ್ತಿರುವ ವಾಯು ಮಾಲಿನ್ಯ!

ಮಿತಿ ಮೀರುತ್ತಿರುವ ವಾಯು ಮಾಲಿನ್ಯ!
ನವದೆಹಲಿ , ಭಾನುವಾರ, 6 ನವೆಂಬರ್ 2022 (08:49 IST)
ನವದೆಹಲಿ : ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿನ ಗಾಳಿಯ ಗುಣಮಟ್ಟ ಅಪಾಯಕಾರಿ ಮಟ್ಟ ತಲುಪಿದ ಹಿನ್ನೆಲೆ ಈ ವಿಷಯವು ಸುಪ್ರೀಂ ಕೋರ್ಟ್ ಗೆ ತಲುಪಿದ್ದು, ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಪೀಠವು ನವೆಂಬರ್ 10 ರಂದು ವಿಚಾರಣೆಗೆ ಪಟ್ಟಿಮಾಡಿದೆ.

ಈ ಬಗ್ಗೆ ಇಂದು ಕೋರ್ಟ್ ಗಮನಕ್ಕೆ ತಂದ ವಕೀಲರು, ಕಳೆದ ಕೆಲವು ವರ್ಷಗಳಲ್ಲಿ ಎಕ್ಯೂಐ ಮಟ್ಟಗಳು 500 ಸಮಿಪಿಸಿದೆ. ಫಿಟ್ ಇರುವ ಜನರು ಸಹ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಪಂಜಾಬ್ ನಲ್ಲಿ 22 ಪ್ರತಿಶತದಷ್ಟು ಹುಲ್ಲು ಸುಡುವಿಕೆಯಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ. ಇದು ಜನರ ಬದುಕುವ ಹಕ್ಕನ್ನು ಒಳಗೊಂಡಿರುವುದರಿಂದ ಇಂದು ಅಥವಾ ನಾಳೆ ಅದನ್ನು ಆಲಿಸುವಂತೆ ನಾವು ಸುಪ್ರೀಂ ಕೋರ್ಟ್ಗೆ ವಿನಂತಿಸುತ್ತೇವೆ ಎಂದರು. 


Share this Story:

Follow Webdunia kannada

ಮುಂದಿನ ಸುದ್ದಿ

ನಗರದ ರಸ್ತೆಗುಂಡಿಗಳನ್ನ ಮುಚ್ಚಲು ವರ್ಚುವಲ್ ಸಭೆ ನಡೆಸಿದ ಬಿಬಿಎಂಪಿ‌ ಆಡಳಿತಗಾರ ರಾಕೇಶ್ ಸಿಂಗ್