ಅಂಬುಲೆನ್ಸ್ ಸೇವೆ ವ್ಯತ್ಯಯ! ಸರ್ಕಾರದ ನಿರ್ಲಕ್ಷ್ಯಕ್ಕೆ ರೋಗಿಗಳು ಕಂಗಾಲು

Webdunia
ಭಾನುವಾರ, 25 ಸೆಪ್ಟಂಬರ್ 2022 (13:21 IST)
ಬೆಂಗಳೂರು : ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ದುರಾಗಿದೆಯಾ ಎಂಬ ಅನುಮಾನವೊಂದು ಕಾಡಿದೆ. ಸರ್ಕಾರದ ನಿರ್ಲಕ್ಷ್ಯಕ್ಕೆ ರೋಗಿಗಳು ಕಂಗಾಲಾಗಿದ್ದು, ರಾಜ್ಯದಲ್ಲಿ ಸಾವು-ನೋವಾಗುವ ಸಾಧ್ಯತೆಗಳಿವೆ.

ಅಪಘಾತ ಪ್ರಕರಣಗಳು, ವಿಷಕುಡಿದ ಪ್ರಕರಣಗಳು, ಹಾವು ಕಚ್ಚಿದ ಪ್ರಕರಗಳು, ಹೆರಿಗೆ ಪ್ರಕರಣಗಳು ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಅಂಬುಲೆನ್ಸ್ ಸೇವೆ ಅಗತ್ಯ. ಈ 108 ಅಂಬುಲೆನ್ಸ್ ಸೇವೆಯನ್ನು ಜಿವಿಕೆ ಸಂಸ್ಥೆ ನಡೆಸುತ್ತಾ ಇದೆ.

ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108 ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ.

ನಿನ್ನೆ ಸಂಜೆಯಿಂದ ಅಂಬುಲೆನ್ಸ್ ಸೇವೆ ಇಲ್ಲದ ಕಾರಣ ಜನರಿಗೆ ತೀರ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗ್ತಿಲ್ಲ ಅಂತಾ ಹೇಳಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಿಂದ 108ಗೆ ಕರೆ ಹೋಗ್ತಿಲ್ಲ ಮತ್ತು ಕರೆ ಸ್ವೀಕರಿಸ್ತಿಲ್ಲ ಅಂತಾ ಹೇಳಲಾಗುತ್ತಿದೆ.

ಈ ಸಂಬಂಧ ಜಿವಿಕೆ ಟೆಕ್ನಿಕಲ್ ಟೀಂನಿಂದ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, 108 ಸೇವೆಯಲ್ಲಿ ತಾಂತ್ರಿಕ ಸಮಸ್ಯೆ ಆಗಿರೋದು ನಿಜ. ಸರ್ವರ್ ಪ್ರಾಬ್ಲಂನಿಂದ ಕರೆ ಸ್ವೀಕರಿಸಲಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ವೇಳೆ ಪಟಾಕಿ ಕಣ್ಣಿಗೆ ಬಿದ್ದರೆ ಇದೊಂದು ತಪ್ಪು ಮಾಡಬೇಡಿ

ದೇವಸ್ಥಾನಕ್ಕೆ ನಾಯಿ ಹೋಗಬಹುದು, ಪರಿಶಿಷ್ಠರು ಹೋಗಬಾರದು: ಬಸವರಾಜ ರಾಯರೆಡ್ಡಿ

ಭಾರತವನ್ನು ಹೂತು ಹಾಕ್ತೇವೆ: ಪಾಕಿಸ್ತಾನ ಯಡವಟ್ಟು ಸಚಿವ ಖ್ವಾಜಾ ಆಸಿಫ್ ಹೇಳಿಕೆ

Karnataka Weather: ಶಕ್ತಿ ಸೈಕ್ಲೋನ್ ಇಫೆಕ್ಟ್, ಈ ದಿನದವರೆಗೂ ರಾಜ್ಯದಲ್ಲಿ ಮಳೆ ಸೂಚನೆ

ಮುಂದಿನ ಸುದ್ದಿ
Show comments