Publish Date: Sun, 12 Aug 2018 (09:30 IST)
Updated Date: Sun, 12 Aug 2018 (09:31 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ನ್ನು ಸರ್ವನಾಶ ಮಾಡುವುದೇ ನಮ್ಮ ಗುರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸವಾಲು ಹಾಕಿದ್ದಾರೆ.
ಪಶ್ಚಿಮ ಬಂಗಾಲದಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ ಅಕ್ರಮ ವಲಸಿಗರ ವಿಚಾರದಲ್ಲಿ ಮಮತಾ ಬ್ಯಾನರ್ಜಿ ನಡೆದುಕೊಳ್ಳುತ್ತಿರುವ ರೀತಿಯನ್ನು ಟೀಕಿಸಿದ್ದಾರೆ. ಅಕ್ರಮ ವಲಸಿಗರಿಗೆ ನಾವು ಮಣೆ ಹಾಕಬೇಕಾ? ಇದನ್ನು ಪ್ರಶ್ನಿಸುತ್ತಿರುವ ಮಮತಾ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
ನಮಗೆ ಮತ ಬ್ಯಾಂಕ್ ಗಿಂತ ಹೆಚ್ಚು, ನಮ್ಮ ದೇಶವೇ ಮೊದಲು. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ವೋಟ್ ಬ್ಯಾಂಕ್ ಗಾಗಿ ಎನ್ ಆರ್ ಸಿ ವಿರೋಧಿಸುತ್ತಿದೆ. ಅವರು ಎಷ್ಟೇ ವಿರೋಧಿಸಿದರೂ ಸರಿಯೇ. ನಮ್ಮ ಕೆಲಸ ಮಾಡಿಯೇ ತೀರುತ್ತೇವೆ ಎಂದು ಅಮಿತ್ ಶಾ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.