Webdunia - Bharat's app for daily news and videos

Install App

ಆಪರೇಷನ್ ಕಮಲ ಮಾಡಲು ಹೊರಟ ಬಿಜೆಪಿ ನಾಯಕರಿಗೆ ಅಮಿತ್ ಶಾ ಖಡಕ್ ಸೂಚನೆ?

Webdunia
ಶನಿವಾರ, 15 ಸೆಪ್ಟಂಬರ್ 2018 (08:44 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಖಡಕ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಪಕ್ಷ ಬಿಜೆಪಿ ಆಡಳಿತಾರೂಢ ಪಕ್ಷದ ಕೆಲವು ಶಾಸಕರನ್ನು ತನ್ನತ್ತ ಸೆಳೆದು ಸರ್ಕಾರ ಉರುಳಿಸಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿವೆ. ಅಷ್ಟೇ ಅಲ್ಲ, ಬೆಳಗಾವಿ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಭಿನ್ನಮತದ ಹಿಂದೆಯೂ ಬಿಜೆಪಿ ಕೈವಾಡವಿದೆ ಎಂಬ ಆರೋಪವಿದೆ.

ಇದೆಲ್ಲದರ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಪರೇಷನ್ ಕಮಲ ಮಾಡಿ ಪಕ್ಷದ ಇಮೇಜ್ ಗೆ ಧಕ್ಕೆ ತರದೇ ಒಳ್ಳೆಯ ವಿಪಕ್ಷವಾಗಿ ಕೆಲಸ ಮಾಡುವಂತೆ ತಮ್ಮನ್ನು ಭೇಟಿ ಮಾಡಿದ ಬಿಎಸ್ ಯಡಿಯೂರಪ್ಪಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈಗ ಸರ್ಕಾರ ಉರುಳಿಸುವ ಪ್ರಯತ್ನ ಮಾಡಿದರೆ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಪಕ್ಷಕ್ಕೆ ಹೊಡೆತ ಬೀಳಬಹುದು ಎಂಬ ಲೆಕ್ಕಾಚಾರ ರಾಷ್ಟ್ರೀಯ ನಾಯಕರದ್ದು ಎನ್ನಲಾಗಿದೆ. ಹೀಗಾಗಿ ಸರ್ಕಾರ ಉರುಳಿಸುವ ಪ್ರಯತ್ನ ಮಾಡಬೇಡಿ ಎಂದು ಅಮಿತ್ ಶಾ ಸೂಚಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments