Select Your Language

Notifications

webdunia
webdunia
webdunia
webdunia

ಸೋತರೂ ಕಾಂಗ್ರೆಸ್ ನವರು ಅದ್ಯಾಕೆ ಸೆಲೆಬ್ರೇಷನ್ ಮಾಡ್ತಿದ್ದಾರೋ: ಅಮಿತ್ ಶಾ ಟಾಂಗ್

ಸೋತರೂ ಕಾಂಗ್ರೆಸ್ ನವರು ಅದ್ಯಾಕೆ ಸೆಲೆಬ್ರೇಷನ್ ಮಾಡ್ತಿದ್ದಾರೋ: ಅಮಿತ್ ಶಾ ಟಾಂಗ್
ನವದೆಹಲಿ , ಮಂಗಳವಾರ, 22 ಮೇ 2018 (08:41 IST)
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಮೂರೇ ದಿನಕ್ಕೆ ಅಧಿಕಾರ ಕಳೆದುಕೊಳ್ಳುತ್ತಿದ್ದಂತೆ ಜೆಡಿಎಸ್ ಜತೆ ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚಿಸಲು ಹೊರಟಿರುವ ಕಾಂಗ್ರೆಸ್ ರಾಜ್ಯಾದ್ಯಂತ ಸಂಭ್ರಮಾಚರಿಸುವುದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟಾಂಗ್ ಕೊಟ್ಟಿದ್ದಾರೆ.

‘ಕೇವಲ ಕಾಂಗ್ರೆಸ್ ಮಾತ್ರ ಸಂಭ್ರಮಿಸುತ್ತಿದೆ. ಆದರೆ ಕರ್ನಾಟಕದ ಜನ ಸೆಲೆಬ್ರೇಟ್ ಮಾಡುತ್ತಿಲ್ಲ. ಇವರ ಹೆಚ್ಚಿನ ಸಚಿವರೇ ಸೋತರೂ ಈ ಮಟ್ಟಿಗೆ ಅದ್ಯಾಕೆ ಕಾಂಗ್ರೆಸ್ ನವರು ಸೆಲೆಬ್ರೇಟ್ ಮಾಡುತ್ತಿದ್ದಾರೋ ಗೊತ್ತಿಲ್ಲ’ ಎಂದು ಶಾ ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸುವ ಮೂಲಕ ಕಾಂಗ್ರೆಸ್ ಕರ್ನಾಟಕದಲ್ಲಿ ಜನಾದೇಶವನ್ನೇ ತಳ್ಳಿ ಹಾಕಿದೆ ಎಂದು ಅವರು ಆಪಾದಿಸಿದ್ದಾರೆ. 2019 ರ ಚುನಾವಣೆಯಲ್ಲಿ ನಾವು ಬಹುಮತದೊಂದಿಗೆ ಸರ್ಕಾರ ರಚಿಸಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮನಗರಕ್ಕೆ ರಾಜೀನಾಮೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ