Webdunia - Bharat's app for daily news and videos

Install App

ಸೋಂಕಿತ ಮಹಿಳೆ ಮಕ್ಕಳಿಗೆ ಎದೆ ಹಾಲು ಕುಡಿಸಬಹುದು!

Webdunia
ಮಂಗಳವಾರ, 27 ಜುಲೈ 2021 (14:20 IST)
ನವದೆಹಲಿ(ಜು.27): ಕೊರೋನಾ ಸೋಂಕಿತೆಯಾದ ಹೊರತಾಗಿಯೂ, ಮಹಿಳೆಯರು ತಮ್ಮ ಮಕ್ಕಳಿಗೆ ಎದೆ ಹಾಲನ್ನೇ ಉಣಿಸಬೇಕು. ಉಳಿದ ಸಂದರ್ಭಗಳಲ್ಲಿ ಮಗುವಿನಿಂದ 6 ಅಡಿಗಳ ಅಂತರ ಕಾಯ್ದುಕೊಳ್ಳುವಂತೆ ಹಿರಿಯ ವೈದ್ಯರೊಬ್ಬರು ಸಲಹೆ ನೀಡಿದ್ದಾರೆ.

* ಗರ್ಭಿಣಿ ಮಹಿಳೆ ತಾನಿರುವ ಸ್ಥಳವನ್ನು ಶುಚಿಯಾಗಿಟ್ಟುಕೊಳ್ಳಬೇಕು
* ಸೋಂಕಿತ ಮಹಿಳೆ ಮಕ್ಕಳಿಗೆ ಎದೆ ಹಾಲು ಕುಡಿಸಬಹುದು
* ಹಾಲುಣಿಸಲು ಬರುವ ಮುನ್ನ ಮಾಸ್ಕ್ ಧರಿಸಿ, ಶುಚಿತ್ವ ಕಾಯ್ದುಕೊಳ್ಳಿ

ಈ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿದ ಡಾ. ಮಂಜು ಪುರಿ, ‘ತಾಯಿಯಿಂದ ಹಸುಗೂಸುಗಳಿಗೆ ಕೋವಿಡ್ ಹಬ್ಬಲಿದೆ ಎಂಬುದು ಈವರೆಗೆ ಖಚಿತವಾಗಿಲ್ಲ. ಆದಾಗ್ಯೂ, ಸೋಂಕಿತ ಗರ್ಭಿಣಿಯು ತಾನು ಜನ್ಮ ನೀಡುವ ಮಗುವಿಗೆ ತನ್ನಿಂದ ಕೊರೋನಾ ವೈರಸ್ ಹರಡದಂತೆ ಎಲ್ಲಾ ಮುಂಜಾಗ್ರತೆಗಳನ್ನು ವಹಿಸಬೇಕು. ಎದೆ ಹಾಲು ಉಣಿಸಲು ಬರುವ ಮುನ್ನ ತಾಯಿಯು ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯಬೇಕು, ಮುಖಕ್ಕೆ ಮುಖಗವಸು ಅಥವಾ ಫೇಸ್ಶೀಲ್ಡ್ಗಳನ್ನು ಧರಿಸಿರಬೇಕು. ಜೊತೆಗೆ ತನ್ನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ್ಗೆ ಸ್ಯಾನಿಟೈಸ್ ಮಾಡಬೇಕು’ ಎಂದು ಹೇಳಿದ್ದಾರೆ.
ಕೋವಿಡ್ ಪಾಸಿಟಿವಿಟಿ ದರ ಶೇ.3.41ಕ್ಕೆ ಏರಿಕೆ
ಸೋಮವಾರ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 39,361 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಇದೇ ಅವಧಿಯಲ್ಲಿ 416 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಆದರೆ, 35 ದಿನಗಳ ಬಳಿಕ ದೈನಂದಿನ ಪಾಸಿಟಿವಿಟಿ ದರ ಶೇ.3ಕ್ಕಿಂತ ಹೆಚ್ಚು (3.41%) ದಾಖಲಾಗಿದೆ. ಇದೇ ವೇಳೆ, ಸಕ್ರಿಯ ಸೋಂಕಿತರ ಸಂಖ್ಯೆ 4.08 ಲಕ್ಷದಿಂದ 4.11 ಲಕ್ಷಕ್ಕೆ ಹೆಚ್ಚಳವಾಗಿದೆ. 3ನೇ ಅಲೆ ಏಳಬಹುದು ಎಂದು ತಜ್ಞರು ಹೇಳುತ್ತಿರುವ ನಡುವೆಯೇ ಪಾಸಿಟಿವಿಟಿ ದರ ಹಾಗೂ ಸಕ್ರಿಯ ಪ್ರಕರಣಗಳು ಏರಿಕೆ ಆಗಿರುವುದು ಎಚ್ಚರಿಕೆ ಗಂಟೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

RCB: ಆರ್ ಸಿಬಿ ಆಟಗಾರರಿಗೆ ಸನ್ಮಾನಕ್ಕಿಂತ ಅಧಿಕಾರಿಗಳು, ಸಚಿವರ ಮಕ್ಕಳಿಗೆ ಸೆಲ್ಫೀ ತೆಗೆಯುವುದೇ ಹೆಚ್ಚಾಯ್ತು

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

ಮುಂದಿನ ಸುದ್ದಿ
Show comments