Webdunia - Bharat's app for daily news and videos

Install App

ವರುಣನ ಆರ್ಭಟಕ್ಕೆ ಆಂಧ್ರ, ತಮಿಳುನಾಡು ತತ್ತರ!

Webdunia
ಭಾನುವಾರ, 28 ನವೆಂಬರ್ 2021 (07:09 IST)
ಬೆಂಗಳೂರು : ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬುಧವಾರದವರೆಗೂ ಮಳೆ ಜೋರಾಗಿರಲಿದೆ.
ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ 30ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆಂಧ್ರಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಅಬ್ಬರಿಸಲಿದೆ.
ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಈಶಾನ್ಯ ಮಾರುತಗಳು ಅಪ್ಪಳಿಸಲಿವೆ. ಮುಂದಿನ 4 ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಇಂದು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments