Select Your Language

Notifications

webdunia
webdunia
webdunia
webdunia

ರಾಮನಗರ ಉಪಚುನಾವಣೆ: ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕಣಕ್ಕೆ

ರಾಮನಗರ ಉಪಚುನಾವಣೆ: ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕಣಕ್ಕೆ
ಬೆಂಗಳೂರು , ಬುಧವಾರ, 3 ಅಕ್ಟೋಬರ್ 2018 (09:14 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ತಾವು ಸ್ಪರ್ಧಿಸಿದ್ದ ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು ಆ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

ಇಂದು ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ  ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಲಿರುವ ಕುಮಾರಸ್ವಾಮಿ ಬಳಿಕ ಅನಿತಾ ಸ್ಪರ್ಧೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಈ ಮೊದಲು ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸುವ ಬಗ್ಗೆಯೂ ಎಚ್ ಡಿಕೆ ಚಿಂತನೆ ನಡೆಸಿದ್ದರು. ಆದರೆ ನಿಖಿಲ್ ಈಗಲೇ ರಾಜಕೀಯ ಪ್ರವೇಶ ಬೇಡ ಎಂಬ ಕಾರಣಕ್ಕೆ ಪತ್ನಿಯನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ರಾಮನಗರ ತಮ್ಮ ಸ್ವಕ್ಷೇತ್ರವಾಗಿರುವುದರಿಂದ ಸಿಎಂ ಎಚ್ ಡಿಕೆಗೆ ಇದು ಪ್ರತಿಷ್ಠೆಯ ಕಣವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಜೀ ಮೊದಲು ಕಪಟ ನಾಟಕ ಬಿಡಿ: ಬಿಎಸ್ ವೈ ಟಾಂಗ್