Webdunia - Bharat's app for daily news and videos

Install App

ಬಳ್ಳಾರಿ ಟು ಬೆಂಗಳೂರು: ಅಣ್ಣಾ ಹಜಾರೆ ಬೆಂಬಲಿಸಿ ಪಾದಯಾತ್ರೆ ಶುರು

Webdunia
ಶುಕ್ರವಾರ, 23 ಮಾರ್ಚ್ 2018 (13:50 IST)
ಸಾಮಾಜಿಕ ಹೋರಾಟಗಾರ ರಾಜಶೇಖರ್ ಮುಲಾಲಿಯಿಂದ ಪಾದಯಾತ್ರೆ ಆರಂಭವಾಗಿದೆ. ಬಳ್ಳಾರಿಯಿಂದ ಆರಂಭಗೊಂಡಿರುವ ಪಾದಯಾತ್ರೆ ಬೆಂಗಳೂರುವರೆಗೆ ನಡೆಯಲಿದೆ. ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಅಣ್ಣಾ ಹಜಾರೆ ಫೌಂಡೇಶನ್ ವತಿಯಿಂದ  50ಕ್ಕೂ ಹೆಚ್ಚು ಸದಸ್ಯರು ಈ  ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಬಳ್ಳಾರಿಯ ಮೋತಿ ವೃತ್ತದ ಬಳಿ ಧ್ವಜಾರೋಹಣ ಮಾಡಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕಲ್ಯಾಣಮಠ ಶ್ರೀ, ನಂದಿಪುರ ಸ್ವಾಮೀಜಿ, ಹೂವಿನಹಡಗಲಿ ಗವಿಮಠದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಪಾದಯಾತ್ರೆಯುದ್ದಕ್ಕೂ ಮತದಾನ ಜಾಗೃತಿ, ಜಾಗೃತಿ ಶಿಬಿರ, ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಹೋರಾಟದಂತಹ ವಿಷಯಗಳ ಮೇಲೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲಾಗುತ್ತದೆ. ನಿವೃತ್ತ ಐಪಿಎಸ್ ಅಧಿಕಾರಿಯ ಅಕ್ರಮ ಆಸ್ತಿ ಸೇರಿದಂತೆ ಹಲವು ದಾಖಲು ಬಿಡುಗಡೆ ಮಾಡುವುದಾಗಿ ಅಣ್ಣಾ ಹಜಾರೆ ಫೌಂಡೇಶನ್ ಸಂಸ್ಥಾಪಕ ರಾಜಶೇಖರ್ ಮುಲಾಲಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments