ಭಾರತದ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡು!

Webdunia
ಶುಕ್ರವಾರ, 4 ಮಾರ್ಚ್ 2022 (09:32 IST)
ಕಳೆದ ಕೆಲವು ದಿನಗಳ ಹಿಂದೆ ರಷ್ಯಾದ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದ.

ಈ ಘಟನೆಯ ಬೆನ್ನಲ್ಲೇ ಇಂದು ಮತ್ತೋರ್ವ ವಿದ್ಯಾರ್ಥಿಗೆ ಗುಂಡು ತಗುಲಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವರಾಗಿರುವ ಜನರಲ್ (ನಿವೃತ್ತ) ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ. ಪೋಲಂಡ್ನಲ್ಲಿ ಅವರು ಎಎನ್ಐನೊಂದಿಗೆ ಮಾತನಾಡಿದರು. ‘ಕೀವ್ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದ್ದು, ಆತ ಮಾರ್ಗ ಮಧ್ಯದಲ್ಲಿ ವಾಪಸ್ಸಾಗಿದ್ದಾರೆ. ಅವರನ್ನು ಕೀವ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ’ ಎಂದು ವಿಕೆ ಸಿಂಗ್ ಹೇಳಿದ್ದಾರೆ.

‘ಭಾರತದ ರಾಯಭಾರ ಕಚೇರಿಯು ಈ ಹಿಂದೆ ಕೀವ್ ತೊರೆಯಬೇಕು ಎಂದು ತಿಳಿಸಿತ್ತು. ಯುದ್ಧದ ಸಂದರ್ಭದಲ್ಲಿ ಧರ್ಮ, ಜಾತೀಯತೆಯನ್ನು ನೋಡುವುದಿಲ್ಲ’ ಎಂದು ವಿಕೆ ಸಿಂಗ್ ಹೇಳಿದ್ದಾರೆ. ಪ್ರಸ್ತುತ ಉಕ್ರೇನ್ನಲ್ಲಿನ ವಿದ್ಯಾರ್ಥಿಗಳು ಗಡಿ ಪ್ರದೇಶಗಳತ್ತ ತೆರಳಲು ಯತ್ನಿಸುತ್ತಿದ್ದಾರೆ.

ನಾಲ್ವರು ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಎಂ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ (ನಿವೃತ್ತ) ವಿಕೆ ಸಿಂಗ್ — ಉಕ್ರೇನ್ ಗಡಿ ದೇಶಗಳಲ್ಲಿ ಆಪರೇಷನ್ ಗಂಗಾದ ಜವಾಬ್ದಾರಿ ಹೊತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಮುಂದಿನ ಸುದ್ದಿ
Show comments