Webdunia - Bharat's app for daily news and videos

Install App

ಮತ್ತೊಂದು ನಿರ್ಭಯಾ ಪ್ರಕರಣ; ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದ ಕಾಮುಕ

Webdunia
ಶನಿವಾರ, 11 ಸೆಪ್ಟಂಬರ್ 2021 (09:24 IST)
ಮುಂಬೈ(ಸೆ.11): ವಾಣಿಜ್ಯ ನಗರಿ ಮುಂಬೈನಲ್ಲಿ ನಿರ್ಭಯಾ ಪ್ರಕರಣದ ಮಾದರಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಕಾಮುಕ ಮಹಿಳೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾನೆ. ಸದ್ಯ ಸಂತ್ರಸ್ತೆಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಮುಂಬೈನ ಸಕಿ ನಕ ಪ್ರದೇಶದ ಖೈರಾನಿ ಪ್ರದೇಶದಲ್ಲಿ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

30 ವರ್ಷದ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಇದೊಂದು ಪೈಶಾಚಿಕ ಕೃತ್ಯವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಸೆರೆ ಹಿಡಿಯಲು ಪೊಲೀಸರು ಈಗಾಗಲೇ ತನಿಖೆ ಶುರು ಮಾಡಿದ್ದಾರೆ.
ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಕಂಟ್ರೋಲ್ ರೂಮ್ಗೆ ಮಧ್ಯರಾತ್ರಿ 3.30ಕ್ಕೆ ಫೋನ್ ಕರೆಯೊಂದು ಬಂತು. ‘‘ಸಕಿ ನಕ ಪ್ರದೇಶದ ಖೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಳೆ‘‘ ಎಂದು ಅನಾಮಿಕ ಧ್ವನಿಯು ಹೇಳಿತು ಎಂದು ಪೊಲೀಸರು ತಿಳಿಸಿದ್ದಾರೆ.
ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಘಟ್ಕೋಪರ್ನ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದರು. ಮಹಿಳೆಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376(ಅತ್ಯಾಚಾರಕ್ಕೆ ಶಿಕ್ಷೆ) ಹಾಗೂ 307(ಕೊಲೆ ಯತ್ನ) ಪ್ರಕರಣದಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಬಂಧಿತನನ್ನು 42 ವರ್ಷದ ಮೋಹನ್ ಚೌಹಾಣ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ‘‘ಮಹಿಳೆಯು ಕ್ರೂರ ರೀತಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ ಹಾಗೂ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ನ್ನು ಹಾಕಲಾಗಿದೆ. ರಸ್ತೆ ಬದಿ ನಿಂತಿದ್ದ ಟೆಂಪೋದಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು‘‘ ಎಂದು ತಿಳಿದು ಬಂದಿದೆ.
2012ರಲ್ಲಿ ಡಿಸೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಿರ್ಭಯಾ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾಮುಕರ ಗುಂಪೊಂದು ಚಲಿಸುತ್ತಿದ್ದ ಬಸ್ನಲ್ಲಿ ಯುವತಿಯನ್ನು ಬಹಳ ಕ್ರೂರವಾಗಿ ಅತ್ಯಾಚಾರ ಮಾಡಿತ್ತು. ಬಹಳ ದಿನಗಳವರೆಗೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಕೊನೆಗೆ ಸಾವನ್ನಪ್ಪಿದ್ದಳು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments