ಮತ್ತೊಂದು ನಿರ್ಭಯಾ ಪ್ರಕರಣ; ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದ ಕಾಮುಕ

Webdunia
ಶನಿವಾರ, 11 ಸೆಪ್ಟಂಬರ್ 2021 (09:24 IST)
ಮುಂಬೈ(ಸೆ.11): ವಾಣಿಜ್ಯ ನಗರಿ ಮುಂಬೈನಲ್ಲಿ ನಿರ್ಭಯಾ ಪ್ರಕರಣದ ಮಾದರಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಕಾಮುಕ ಮಹಿಳೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾನೆ. ಸದ್ಯ ಸಂತ್ರಸ್ತೆಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಮುಂಬೈನ ಸಕಿ ನಕ ಪ್ರದೇಶದ ಖೈರಾನಿ ಪ್ರದೇಶದಲ್ಲಿ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

30 ವರ್ಷದ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಇದೊಂದು ಪೈಶಾಚಿಕ ಕೃತ್ಯವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಸೆರೆ ಹಿಡಿಯಲು ಪೊಲೀಸರು ಈಗಾಗಲೇ ತನಿಖೆ ಶುರು ಮಾಡಿದ್ದಾರೆ.
ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಕಂಟ್ರೋಲ್ ರೂಮ್ಗೆ ಮಧ್ಯರಾತ್ರಿ 3.30ಕ್ಕೆ ಫೋನ್ ಕರೆಯೊಂದು ಬಂತು. ‘‘ಸಕಿ ನಕ ಪ್ರದೇಶದ ಖೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಳೆ‘‘ ಎಂದು ಅನಾಮಿಕ ಧ್ವನಿಯು ಹೇಳಿತು ಎಂದು ಪೊಲೀಸರು ತಿಳಿಸಿದ್ದಾರೆ.
ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಘಟ್ಕೋಪರ್ನ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದರು. ಮಹಿಳೆಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376(ಅತ್ಯಾಚಾರಕ್ಕೆ ಶಿಕ್ಷೆ) ಹಾಗೂ 307(ಕೊಲೆ ಯತ್ನ) ಪ್ರಕರಣದಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಬಂಧಿತನನ್ನು 42 ವರ್ಷದ ಮೋಹನ್ ಚೌಹಾಣ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ‘‘ಮಹಿಳೆಯು ಕ್ರೂರ ರೀತಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ ಹಾಗೂ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ನ್ನು ಹಾಕಲಾಗಿದೆ. ರಸ್ತೆ ಬದಿ ನಿಂತಿದ್ದ ಟೆಂಪೋದಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು‘‘ ಎಂದು ತಿಳಿದು ಬಂದಿದೆ.
2012ರಲ್ಲಿ ಡಿಸೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಿರ್ಭಯಾ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾಮುಕರ ಗುಂಪೊಂದು ಚಲಿಸುತ್ತಿದ್ದ ಬಸ್ನಲ್ಲಿ ಯುವತಿಯನ್ನು ಬಹಳ ಕ್ರೂರವಾಗಿ ಅತ್ಯಾಚಾರ ಮಾಡಿತ್ತು. ಬಹಳ ದಿನಗಳವರೆಗೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಕೊನೆಗೆ ಸಾವನ್ನಪ್ಪಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಪೆಟ್ರೋಲ್‌, ಡಿಸೇಲ್ ದರ ಏರಿಕೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ನಡೆಸುತ್ತಿರುವ ತೆರಿಗೆ ಸುಲಿಗೆ ಬಯಲಾಗಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments