Select Your Language

Notifications

webdunia
webdunia
webdunia
webdunia

ಮೇಕೆದಾಟು ಡಿಪಿಆರ್‌ಗೆ ಅನುಮೋದನೆ

ಮೇಕೆದಾಟು
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾವೇರಿ ಜಲ ನಿರ್ವಹಣೆ ಪ್ರಾಧಿಕಾರದ ಮುಂದೆ ರಾಜ್ಯದ ವಾದ ಮಂಡಿಸಿದ್ದು,
 
ಮುಂದಿನ ವಾರ ನಡೆಯುವ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಜಿಎಂಐಟಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸುಪ್ರೀಂಕೋರ್ಟ್ನಲ್ಲಿ ಯಾವುದೇ ತಡೆಯಾಜ್ಞೆಯೂ ಇಲ್ಲ.

ಈ ವಿಚಾರದಲ್ಲಿ ನೆರೆಯ ತಮಿಳನಾಡಿನ ಎಲ್ಲಾ ಹೇಳಿಕೆಗಳಿಗೆ ನಾವು ಪದೇಪದೇ ಉತ್ತರ ಕೊಡಬೇಕಾದ ಅವಶ್ಯಕತೆ ಇಲ್ಲ ಅಂತ ತಿಳಿಸಿದ್ದಾರೆ. ಜಲ ನಿರ್ವಹಣೆ ಪ್ರಾಧಿಕಾರಕ್ಕೆ ಎಲ್ಲಾ ಅಧಿಕಾರವೂ ಇದೆ.

ಮುಂದಿನ ವಾರ ಪ್ರಾಧಿಕಾರ ಸಭೆ ಕರೆಯುವ ಸಾಧ್ಯತೆ ಇದೆ. ಅಂದಿನ ಸಭೆಯಲ್ಲಿ ರಾಜ್ಯದ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿ ಮೇಲೆ ಅತ್ಯಾಚಾರ!