ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ನೆರವು

Webdunia
ಗುರುವಾರ, 7 ಏಪ್ರಿಲ್ 2022 (15:15 IST)
ನವದೆಹಲಿ :  ಯುದ್ಧ ಪೀಡಿತ ಉಕ್ರೇನಿನಿಂದ ವಿದ್ಯಾಭ್ಯಾಸವನ್ನು ಅರ್ಧಕ್ಕೇ ಮೊಟಕುಗೊಳಿಸಿ ಭಾರತಕ್ಕೆ ಸ್ಥಳಾಂತರಗೊಂಡಿರುವ ವಿದ್ಯಾರ್ಥಿಗಳ  ಶಿಕ್ಷಣವನ್ನು ಮುಂದುವರೆಸಲು,

ನೆರವು ನೀಡುವಂತೆ ಹಂಗೇರಿ, ರೊಮೇನಿಯಾ, ಕಜಕಿಸ್ತಾನ ಮತ್ತು ಪೋಲೆಂಡ್ ಬಳಿ ಭಾರತ  ಮಾತುಕತೆ ನಡೆಸುತ್ತಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್  ಬುಧವಾರ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಉಕ್ರೇನ್ ಪರಿಸ್ಥಿತಿ ಕುರಿತ ಚರ್ಚೆ ವೇಳೆ ಮಾತನಾಡಿದ ಅವರು ‘ಉಕ್ರೇನಿಂದ ಸ್ಥಳಾಂತರಗೊಂಡ ವೈದ್ಯ ವಿದ್ಯಾರ್ಥಿಗಳು ಹಂಗೇರಿ ವಿಶ್ವವಿದ್ಯಾಲಯಗಳಲ್ಲಿ ಕೋರ್ಸ್ ಪೂರ್ಣಗೊಳಿಸಲು ಆ ದೇಶವು ಅನುಮತಿ ನೀಡಿದೆ.

ಬೇರೆ ದೇಶಗಳೂ ಇಂಥದ್ದೇ ಪ್ರಸ್ತಾಪ ಮುಂದಿಟ್ಟಿವೆ. ಹಂಗೇರಿ, ರೊಮೇನಿಯಾ, ಕಜಕಿಸ್ತಾನ ಮತ್ತು ಪೋಲೆಂಡ್ ದೇಶಗಳಲ್ಲೂ ಉಕ್ರೇನ್ ರೀತಿಯ ಶಿಕ್ಷಣ ವ್ಯವಸ್ಥೆ ಇರುವ ಕಾರಣ ಭಾರತದ ಅತಂತ್ರ ವಿದ್ಯಾರ್ಥಿಗಳಿಗೆ ನೆರವು ನೀಡುವಂತೆ ಭಾರತ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ , ವೈದ್ಯ ಪದವಿಯ ಪ್ರಮುಖ 2 ಪರೀಕ್ಷೆಗಳನ್ನು ಬರೆಯುವುದರಿಂದ ಉಕ್ರೇನ್ ಸರ್ಕಾರ ಕೂಡಾ ವಿನಾಯಿತಿ ನೀಡಿದೆ. ಜೊತೆಗೆ ಮೂರರಿಂದ ನಾಲ್ಕನೇ ವರ್ಷಕ್ಕೆ ಬಡ್ತಿ ನೀಡುವುದರಲ್ಲೂ ಕೆಲವೊಂದು ವಿನಾಯ್ತಿ ಪ್ರಕಟಿಸಿದೆ. 6ನೇ ವರ್ಷದ ವಿದ್ಯಾರ್ಥಿಗಳಿಗೆ ಕಡ್ಡಾಯ ಸಿಆರ್ಒಸಿ ಪರೀಕ್ಷೆಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments