2023ರೊಳಗೆ ಭಕ್ತರಿಗೆ ಸಿಗಲಿದೆ ಅಯೋಧ್ಯೆ ರಾಮಲಲ್ಲಾನ ದರ್ಶನ!

Webdunia
ಶುಕ್ರವಾರ, 16 ಜುಲೈ 2021 (15:23 IST)
ಅಯೋಧ್ಯೆ(ಜು.16): ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿ 2023 ರ ಅಂತ್ಯದೊಳಗೆ ಭಕ್ತರ ದರ್ಶನಕ್ಕೆ ತೆರೆಯಲಾಗುತ್ತದೆ. ಬರೋಬ್ಬರಿ 70 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರ ಕಾಮಗಾರಿ 2025ರ ಅಂತ್ಯದೊಳಗೆ ಪೂರ್ಣಗೊಳ್ಳಲಿವೆ ಎಂದು ಯೋಜನೆಯ ಮೇಲ್ವಿಚಾರಣೆ ವಹಿಸಿರುವ ಟ್ರಸ್ಟ್ನ ಪದಾಧಿಕಾರಿಗಳು ತಿಳಿಸಿದ್ದಾರೆ.

* ರಾಮಲಲ್ಲಾನ ನೋಡಲು ಕಾಯುತ್ತಿರುವ ಭಕ್ತರಿಗೆ ಗುಡ್ ನ್ಯೂಸ್
* 2023ರೊಳಗೆ ಭಕ್ತರಿಗೆ ಸಿಗಲಿದೆ ರಾಮನ ದರ್ಶನ
* 2025ರ ಅಂತ್ಯದೊಳಗೆ ಮಂದಿರ ಹಾಘೂ ಆಸುಪಾಸಿನ ಎಲ್ಲಾ ಕಾಮಗಾರಿ ಪೂರ್ಣ

ಈ ಬಗ್ಗೆ ಮಾತನಾಡಿದ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, "2023 ರ ಅಂತ್ಯದೊಳಗೆ, ರಾಮ್ಲಲ್ಲಾನ ದರ್ಶನ ಪಡೆಯಲು ಭಕ್ತರಿಗೆ ರಾಮ ಮಂದಿರದ ಗರ್ಭಗುಡಿ ತೆರೆಯಲಾಗುವುದು" ಎಂದು ಹೇಳಿದ್ದಾರೆ.
ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ 15 ಸದಸ್ಯರು ಹಾಗೂ ಮಂದಿರ ನಿರ್ಮಿಸುತ್ತಿರುವ ಎಂಜಿನಿಯರ್ಗಳು ಮತ್ತು ವಾಸ್ತುಶಿಲ್ಪಿಗಳೊಂದಿಗೆ ಎರಡು ದಿನಗಳ ಸಭೆಯ ನಂತರ ಇಂತಹುದ್ದೊಂದು ನಿರ್ಧಾರ ಪ್ರಕಟಿಸಲಾಗಿದೆ. ಟ್ರಸ್ಟ್ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಳೆದ ವರ್ಷ, 2020ರ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. ಕೊರೋನಾ ಹಾವಳಿ ನಡುವೆಯೂ ಮಂದಿರದ ಕಾರ್ಯ ಮುಂದುವರೆದಿದ್ದು, ಪ್ರಸ್ತುತ ಎಂಜಿನಿಯರ್ಗಳು ದೇವಾಲಯದ ಅಡಿಪಾಯದ ಕೆಲಸ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 15 ರೊಳಗೆ ಇದು ಪೂರ್ಣಗೊಳ್ಳುವ ಸಾಧ್ಯತೆಯಿದೆ.
ನವೆಂಬರ್ನಲ್ಲಿ ದೀಪಾವಳಿ ಹಬ್ಬದ ಬಳಿಕ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಹಣ ಕೊಡಲಿಲ್ಲವೆಂದು ಹೆಂಡತಿ ಮಗಳ ಎದುರೇ ವ್ಯಕ್ತಿಗೆ ಹೀಗೆ ಮಾಡೋದಾ.. ತೃತೀಯ ಲಿಂಗಿಗಳ ದಾಳಿಗೆ ಕೊನೆ ಯಾವಾಗ Video

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಯಾವ ಅಲರ್ಟ್ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments