ಪ್ಲಾಸ್ಟಿಕ್ ವಸ್ತುಗಳು ಬ್ಯಾನ್ !

Webdunia
ಶನಿವಾರ, 2 ಜುಲೈ 2022 (09:42 IST)
ಬೆಂಗಳೂರು : ದೇಶದಲ್ಲಿ ಇಂದಿನಿಂದ ಹೊಸ ಶಕೆ ಆರಂಭವಾಗಲಿದೆ. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಬ್ಯಾನ್ ಆಗಲಿವೆ.

ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ)  ಅಧ್ಯಕ್ಷ ತಿಮ್ಮಯ್ಯ ಸುದ್ದಿಗೋಷ್ಠಿ ನಡೆಸಿ, ಏಕ ಬಳಕೆ ಪ್ಲಾಸ್ಟಿಕ್ ಬ್ಯಾನ್ ಆಗ್ತಿರುವ ಬಗ್ಗೆ ಮಾಹಿತಿ ನೀಡಿದರು.

ನಾಳೆಯಿಂದ ಪ್ಲಾಸ್ಟಿಕ್ ಕಡ್ಡಿ ಹೊಂದಿರುವ ಇಯರ್ ಬಡ್ಸ್, ಬಲೂನ್ನ ಪ್ಲಾಸ್ಟಿಕ್ ಕಡ್ಡಿ, ಐಸ್ಕ್ರೀಂ-ಕ್ಯಾಂಡಿ ಸ್ಟಿಕ್, ಪ್ಲಾಸ್ಟಿಕ್ ಪ್ಲೇಟ್ಸ್, ಕಪ್ಸ್, ಗ್ಲಾಸ್, ಸ್ಪೂನ್, ಪ್ಲಾಸ್ಟಿಕ್ ಚಾಕು ಎಲ್ಲಾ ಬ್ಯಾನ್ ಆಗಲಿವೆ. 

ಈ ನಿಷೇಧಿತ ಪ್ಲಾಸ್ಟಿಕ್ ಬಳಸಿದ್ರೆ, ಮಾರಾಟ ಮಾಡಿದ್ರೆ ದಂಡ ವಿಧಿಸಲಾಗುತ್ತದೆ. ಉತ್ಪಾದಕರಿಗೆ 5 ರಿಂದ 20 ಸಾವಿರ ರೂಪಾಯಿವರೆಗೂ ದಂಡ, ಮಾರಾಟಗಾರರಿಗೆ 200 ರೂಪಾಯಿಯಿಂದ 1 ಸಾವಿರ ರೂಪಾಯಿವರೆಗೂ ದಂಡ ಬೀಳಲಿದೆ.

ಜೊತೆಗೆ ಎಲ್ಲಾ ವಸ್ತುಗಳು ಸೀಜ್ ಆಗಲಿವೆ. ಕೆಎಸ್ಪಿಸಿಬಿ ಜುಲೈ 1 ರಿಂದ ನಿಷೇಧಿತ ವಸ್ತುಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿದ್ದು, ಅವರು ಪ್ಲಾಸ್ಟಿಕ್ಗೆ ಪರ್ಯಾಯಗಳನ್ನು ಒದಗಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಮಿಶ್ರಗೊಬ್ಬರ ಚೀಲಗಳು ಮತ್ತು ಬಟ್ಟೆ ಚೀಲಗಳ ಪೂರೈಕೆಗೆ ಮಂಡಳಿಯು ಈಗಾಗಲೇ ಅನುಮೋದನೆ ನೀಡಿದೆ.

ನಿಷೇಧ ಆದೇಶವು ಕಟ್ಟುನಿಟ್ಟಾಗಿ ಜಾರಿಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಅಧಿಕಾರವನ್ನು ನೀಡಿದೆ. ಕಟ್ಟುನಿಟ್ಟಿನ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, ಮಂಗಳವಾರ ಮಾರ್ಷಲ್ಗಳೊಂದಿಗೆ ಸಭೆ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments