Webdunia - Bharat's app for daily news and videos

Install App

ಬಾಳೆಹಣ್ಣಿಗೆ ಬಂತು ಬಂಗಾರದ ಬೆಲೆ!

Webdunia
ಭಾನುವಾರ, 13 ಆಗಸ್ಟ್ 2023 (09:43 IST)
ಕೋಲಾರ :  ಶ್ರಾವಣ ಮಾಸದ ಆರಂಭವಾಗಿ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಈಗ ಟೊಮೆಟೋ ಸ್ಥಾನವನ್ನು ಬಾಳೆಹಣ್ಣು ತುಂಬಲಿದೆ. ಸದ್ಯ ಬಾಳೆಹಣ್ಣು ಬೆಳೆದವರಿಗೆ ಜಾಕ್ಪಾಟ್ ಎನ್ನುವಂತಾಗಿದ್ದು ಬಾಳೆ ಬೆಳೆದ ರೈತನ ಬದುಕು ಬಂಗಾರವಾಗಿದೆ.
 
ಕೋಲಾರದಲ್ಲಿ ಕಳೆದ ಎರಡು ಮೂರು ತಿಂಗಳಿಂದ ಟೊಮೆಟೋ ಬೆಲೆ ಏರಿಕೆ ಸದ್ದು ಜೋರಾಗಿತ್ತು. ಆದರೆ ಟೊಮೆಟೋ ಬೆಲೆ ಈಗ ಕಡಿಮೆಯಾಗಿದೆ. ಆದರೆ ಟೊಮೆಟೋ ರೀತಿಯಲ್ಲಿ ಈಗ ಹೆಚ್ಚು ಸದ್ದು ಮಾಡುತ್ತಿರುವುದು ಬಾಳೆ ಹಣ್ಣು. ಇನ್ನೇನು ಶ್ರಾವಣ ಮಾಸ ಆರಂಭವಾಗಲಿದ್ದು, ವರಮಹಾಲಕ್ಷ್ಮಿ, ಗೌರಿ-ಗಣೇಶ ಹಬ್ಬ, ದಸರಾ ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳಿವೆ.

ಈ ಹಿನ್ನೆಲೆಯಲ್ಲಿ ಬಾಳೆಹಣ್ಣಿಗೆ ಬೇಡಿಕೆ ಹೆಚ್ಚಾಗಿದೆ. ಬಾಳೆ ಹಣ್ಣು ಬೆಳೆದ ರೈತರಿಗೆ ಜಾಕ್ಪಾಟ್ ಬೆಲೆ ಸಿಗುತ್ತಿದೆ. ಏಲಕ್ಕಿ ಬಾಳೆಹಣ್ಣು ಬೆಳೆದಿರುವ ಕೋಲಾರ ಜಿಲ್ಲೆಯ ದೊಡ್ಡಕಾರಿ ಗ್ರಾಮದ ಪ್ರಭಾಕರ್ ಅವರಿಗೆ ಭರ್ಜರಿ ಬೆಲೆ ಸಿಕ್ಕಿದೆ. ಐದು ಲಕ್ಷ ರೂಪಾಯಿ ಬಂಡವಾಳ ಹಾಕಿ 15 ಲಕ್ಷ ರೂಪಾಯಿ ಆದಾಯ ಗಳಿಸಿದ್ದಾರೆ.

ಪ್ರಭಾಕರ್ ತಮ್ಮ ಎರಡೂವರೆ ಎಕರೆ ಪ್ರದೇಶದಲ್ಲಿ ಬಾಳೆಹಣ್ಣು ಬೆಳೆದಿದ್ದು, ಉತ್ತಮ ಫಸಲು ಬಂದಿದೆ. ರೈತರು ತೋಟದಲ್ಲೇ ಒಂದು ಕೆ.ಜಿ. ಬಾಳೆಹಣ್ಣಿಗೆ 75-80 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ವಿವಿಧ ಕಂಪನಿಗಳು, ವಿವಿಧ ಮಾರುಕಟ್ಟೆಗಳಿಂದ ರೈತರ ತೋಟಕ್ಕೆ ಬಂದು ಬಾಳೆಹಣ್ಣು ಖರೀದಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಮುಂದಿನ ಸುದ್ದಿ
Show comments