ಮುಂದಿನ ದಸರಾ ಹಬ್ಬಕ್ಕೆ ಬೆಂಗಳೂರು ಮೈಸೂರು ರಸ್ತೆ ಲೋಕಾರ್ಪಣೆ

Webdunia
ಶನಿವಾರ, 14 ಆಗಸ್ಟ್ 2021 (10:12 IST)
ನವದೆಹಲಿ(ಆ.14): ದೇಶದಲ್ಲಿ ಅತ್ಯುತ್ತಮ ದರ್ಜೆಯ ಹಾಗೂ ಅತ್ಯಂತ ವೇಗವಾಗಿ ರಸ್ತೆ ನಿರ್ಮಾಣ ಕೆಲಸಗಳು ನಡೆಯುತ್ತಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಕುರಿತು ಅತೀವ ಮುತುವರ್ಜಿ ವಹಿಸಿ ಕೆಲ ನಿರ್ವಹಿಸುತ್ತಿದ್ದಾರೆ. ಇದೀಗ ಗಡ್ಕರಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ರಸ್ತೆ ಕುರಿತು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಬರೋಬ್ಬರಿ 8,172 ಕೋಟಿ ರೂಪಾಯಿ ವೆಚ್ಚದ ಈ ರಸ್ತೆ ಪ್ರಯಾಣದ ಸಮಯವನ್ನು ಅರ್ಧಕ್ಕೆ ಇಳಿಸಲಿದೆ.

ನಿತಿನ್ ಗಡ್ಕರಿ ಟ್ವೀಟ್ ಮೂಲಕ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ರಸ್ತೆ ಕಾಮಾಗಾರಿ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. 10 ಲೇನ್ ಬೆಂಗಳೂರು ಮೈಸೂರು ಎಕಾನಾಮಿಕ್ ಕಾರಿಡಾರ್ ಅತ್ಯಂತ ವೇಗದಲ್ಲಿ ನಿರ್ಮಾಣವಾಗುತ್ತಿದೆ. 2022 ಅಕ್ಟೋಬರ್ ತಿಂಗಳಲ್ಲಿ ಈ ರಸ್ತೆ ಕಾಮಾಗಾರಿ ಪೂರ್ಣಗೊಳ್ಳಲಿದೆ. ಈ ರಸ್ತೆಯಿಂದ ಎರಡು ನಗರಗಳ ಪ್ರಯಾಣ ಸಮಯ 3 ಗಂಟೆಯಿಂದ ಕೇವಲ 90 ನಿಮಿಷಕ್ಕೆ ಇಳಿಯಲಿದೆ ಎಂದು ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ. ಈ ಸಂತಸ ವಿಚಾರನ್ನು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
 ಗಡ್ಕರಿ ಹೇಳಿದಂತೆ ಮುಂದಿನ ವರ್ಷದ ಅಕ್ಟೋಬರ್ ತಿಂಗಳಲ್ಲಿ ರಸ್ತೆ ಕಾಮಾಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ವರ್ಷದ ದಸರಾ ಹಬ್ಬಕ್ಕೆ ನೂತನ ರಸ್ತೆ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ. ಕೊರೋನಾ ಕಾರಣ ಕಾಮಾಗಾರಿ ಕೊಂಚ ವಿಳಂಬವಾಗಿದೆ ಎಂದು ಗಡ್ಕರಿ ಈ ಮೊದಲು ಹೇಳಿದ್ದರು.
 ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ರಸ್ತೆಯಲ್ಲಿ ಹಲವು ವಿಶೇಷತೆಗಳಿವೆ. 117 ಕಿ.ಮೀ ಉದ್ದದ ಈ ರಸ್ತೆ ಕಾಮಾಗಾರಿಗೆ 8,172 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಅತ್ಯಾಧುನಿಕ ಹಾಗೂ ಅಂತಾರಾಷ್ಟ್ರೀಯ ದರ್ಜೆಯ ರಸ್ತೆ ಇದಾಗಿದೆ. ಬೆಂಗಳೂರು ಮೈಸೂರು ರಸ್ತೆ ನಡುವೆ 3 ಫ್ಲೈ ಓವರ್ ನಿರ್ಮಾಣ ಮಾಡಲಾಗಿದೆ. ಬೆಂಗಳೂರಿನ ಹೊರಭಾಗ, ಮದ್ದೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಲಾಗಿದ್ದು, ಸರಾಗ ಪ್ರಯಾಣಕ್ಕೆ ಅನೂಕೂಲ ಮಾಡಲಾಗಿದೆ.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ರಸ್ತೆ ಕಾಮಾಗಾರಿಯನ್ನು ಎರಡು ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತವನ್ನು ಮೇ 2019ರಲ್ಲಿ ಆರಂಭಿಸಲಾಗಿದೆ. ಬೆಂಗಳೂರಿನಿಂದ ಮದ್ದೂರಿನ ಬಳಿಯ ನಿಡಘಟ್ಟ ವರೆಗಿನ 56 ಕಿ.ಮೀ ಉದ್ದದ ರಸ್ತೆ ಕಾಮಾಗಾರಿ ಮೊದಲ ಹಂತದಲ್ಲಿ ಆರಂಭಗೊಂಡಿದೆ.
ಎರಡನೇ ಹಂತವನ್ನು 2019ರ ಡಿಸೆಂಬರ್ ತಿಂಗಳಲ್ಲಿ ಆರಂಭಿಸಲಾಗಿದೆ. ಎರಡನೇ ಹಂತದ ನಿಡಘಟ್ಟದಿಂದ ಮೈಸೂರು ವರೆಗಿನ 61 ಕಿ.ಮೀ ಉದ್ದದ ರಸ್ತೆ ಕಾಮಾಗಾರಿ ಭರದಿಂದ ಸಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments