Webdunia - Bharat's app for daily news and videos

Install App

ಬೆಂಗಳೂರು ಕಂಪನಿಯ 800 ಕೋಟಿ ತೆರಿಗೆ ಕಳ್ಳಾಟ!

Webdunia
ಬುಧವಾರ, 14 ಜುಲೈ 2021 (11:10 IST)
ನವದೆಹಲಿ(ಜು.14): ಬೆಂಗಳೂರಿನ ಕಂಪನಿಯೊಂದರ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಕಂಪನಿಯು ಘೋಷಿಸಿಕೊಳ್ಳದೆ ‘ಬಚ್ಚಿಟ್ಟಿದ್ದ’ 880 ಕೋಟಿ ರು. ಆದಾಯವನ್ನು ಪತ್ತೆ ಮಾಡಿದ್ದಾರೆ. ಈ ಮೂಲಕ ಇಷ್ಟುಆದಾಯಕ್ಕೆ ಅನೇಕ ವರ್ಷಗಳಿಂದ ತೆರಿಗೆ ವಂಚನೆ ಮಾಡುತ್ತಿದ್ದ ಕೃತ್ಯವನ್ನು ಬಯಲಿಗೆಳೆದಿದ್ದಾರೆ.

ಈ ಮಾನವ ಸಂಪನ್ಮೂಲ ಸೇವಾ ಕಂಪನಿಯ 2 ಕ್ಯಾಂಪಸ್ಗಳ ಮೇಲೆ ಜುಲೈ 8ರಂದೇ ದಾಳಿ ನಡೆದಿದೆ. ಆದರೆ ಅದು ಯಾವ ಕಂಪನಿ ಎಂಬ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆ ಬಹಿರಂಗಪಡಿಸಿಲ್ಲ.
* ಕಮ್ಮಿ ಸಂಬಳ ನೀಡುತ್ತಿರುವುದಾಗಿ ತೆರಿಗೆ ವಂಚನೆ
* ಬೆಂಗಳೂರು ಕಂಪನಿಯ 800 ಕೋಟಿ ತೆರಿಗೆ ಕಳ್ಳಾಟ
* ಆದಾಯ ತೆರಿಗೆ ವೇಳೆ ತೆರಿಗೆ ಅಕ್ರಮ ಬೆಳಕಿಗೆ

ವಂಚನೆ ಹೇಗೆ ನಡೆದಿತ್ತು?:
ಆದಾಯ ತೆರಿಗೆ ಕಾಯ್ದೆಯಲ್ಲಿ 80ಜೆಜೆಎಎ ಎಂಬ ಪರಿಚ್ಛೇದವಿದೆ. ಇದರ ಅಡಿ ಉದ್ಯೋಗಿಗೆ 25 ಸಾವಿರ ರು.ಗಿಂತ ಕಡಿಮೆ ಸಂಬಳವನ್ನು ಕಂಪನಿ ನೀಡುತ್ತಿದ್ದರೆ ಆ ಕಂಪನಿಗೆ ತೆರಿಗೆ ಕಟ್ಟುವುದರಿಂದ ವಿನಾಯಿತಿ ಲಭಿಸುತ್ತದೆ. ಈಗ ಆಪಾದಿತ ಕಂಪನಿಯ ಮಾಲೀಕ ಇದೇ ಪರಿಚ್ಛೇದವನ್ನು ದುರ್ಬಳಕೆ ಮಾಡಿಕೊಂಡು 880 ಕೋಟಿ ರು. ಆದಾಯ ಮುಚ್ಟಿಟ್ಟು ವಂಚನೆ ಮಾಡಿದ್ದಾನೆ ಎಂಬುದು ದಾಳಿಯಲ್ಲಿ ಪತ್ತೆಯಾಗಿದೆ.
ಈ ಕಂಪನಿಯಲ್ಲಿ ಮಾಸಿಕ 25 ಸಾವಿರ ರು.ಗಿಂತ ಹೆಚ್ಚು ವೇತನ ಪಡೆಯುವ ಹಲವಾರು ಉದ್ಯೋಗಿಗಳಿದ್ದಾರೆ. ಆದರೆ ಈ ಉದ್ಯೋಗಿಗಳಿಗೆ 25 ಸಾವಿರಕ್ಕಿಂತ ಕಡಿಮೆ ಸಂಬಳ ನೀಡುತ್ತಿದ್ದೇವೆ ಎಂದು ಕಂಪನಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದೆ. ಈ ಪ್ರಕಾರ, ‘25 ಸಾವಿರ ರು.ಗಿಂತ ಕಮ್ಮಿ ಸಂಬಳ ಪಡೆಯುವ ಇಂತಿಷ್ಟುನೌಕರರು ನಮ್ಮಲ್ಲಿ ಇದ್ದು, ಸಂಬಳದ ಮೇಲೆ 80ಜೆಜೆಎಎ ಅಡಿ ತೆರಿಗೆ ವಿನಾಯಿತಿ ಕೊಡಿ’ ಎಂದು ಆದಾಯ ತೆರಿಗೆ ಇಲಾಖೆಗೆ ಕೋರಿಕೆ ಸಲ್ಲಿಸಿ ನೂರಾರು ಕೋಟಿ ರುಪಾಯಿ ತೆರಿಗೆ ಕಟ್ಟದೇ ಉಳಿಸಿಕೊಂಡಿದ್ದು ತಿಳಿದುಬಂದಿದೆ.
ಇದಲ್ಲದೆ, ಇನ್ನೂ ಕೆಲವರು ಈ ಕಂಪನಿಯ ನೌಕರರೇ ಅಲ್ಲದಿದ್ದರೂ, ಅಂಥವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅವರಿಗೂ 25 ಸಾವಿರ ರು.ಗಿಂತ ಕಡಿಮೆ ಸಂಬಳ ನೀಡುತ್ತಿರುವುದಾಗಿ ಇಲಾಖೆಗೆ ಮಾಹಿತಿ ನೀಡಲಾಗಿದೆ. ಹಲವಾರು ವರ್ಷಗಳಿಂದ ಈ ಕೃತ್ಯವನ್ನು ಕಂಪನಿ ಎಸಗಿದೆ. ಈ ಮೂಲಕ ನಿಜವಾದ 880 ಕೋಟಿ ರು. ಆದಾಯ ಬಚ್ಚಿಟ್ಟು, ಅಷ್ಟುಆದಾಯಕ್ಕೆ ತೆರಿಗೆ ಇಲಾಖೆಗೆ ತೆರಿಗೆ ವಂಚನೆ ಎಸಗಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ತಿಳಿಸಿದೆ

 
ನವದೆಹಲಿ(ಜು.14): ಬೆಂಗಳೂರಿನ ಕಂಪನಿಯೊಂದರ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಕಂಪನಿಯು ಘೋಷಿಸಿಕೊಳ್ಳದೆ ‘ಬಚ್ಚಿಟ್ಟಿದ್ದ’ 880 ಕೋಟಿ ರು. ಆದಾಯವನ್ನು ಪತ್ತೆ ಮಾಡಿದ್ದಾರೆ. ಈ ಮೂಲಕ ಇಷ್ಟುಆದಾಯಕ್ಕೆ ಅನೇಕ ವರ್ಷಗಳಿಂದ ತೆರಿಗೆ ವಂಚನೆ ಮಾಡುತ್ತಿದ್ದ ಕೃತ್ಯವನ್ನು ಬಯಲಿಗೆಳೆದಿದ್ದಾರೆ.
ಈ ಮಾನವ ಸಂಪನ್ಮೂಲ ಸೇವಾ ಕಂಪನಿಯ 2 ಕ್ಯಾಂಪಸ್ಗಳ ಮೇಲೆ ಜುಲೈ 8ರಂದೇ ದಾಳಿ ನಡೆದಿದೆ. ಆದರೆ ಅದು ಯಾವ ಕಂಪನಿ ಎಂಬ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆ ಬಹಿರಂಗಪಡಿಸಿಲ್ಲ.
* ಕಮ್ಮಿ ಸಂಬಳ ನೀಡುತ್ತಿರುವುದಾಗಿ ತೆರಿಗೆ ವಂಚನೆ
* ಬೆಂಗಳೂರು ಕಂಪನಿಯ 800 ಕೋಟಿ ತೆರಿಗೆ ಕಳ್ಳಾಟ
* ಆದಾಯ ತೆರಿಗೆ ವೇಳೆ ತೆರಿಗೆ ಅಕ್ರಮ ಬೆಳಕಿಗೆ

ವಂಚನೆ ಹೇಗೆ ನಡೆದಿತ್ತು?:
ಆದಾಯ ತೆರಿಗೆ ಕಾಯ್ದೆಯಲ್ಲಿ 80ಜೆಜೆಎಎ ಎಂಬ ಪರಿಚ್ಛೇದವಿದೆ. ಇದರ ಅಡಿ ಉದ್ಯೋಗಿಗೆ 25 ಸಾವಿರ ರು.ಗಿಂತ ಕಡಿಮೆ ಸಂಬಳವನ್ನು ಕಂಪನಿ ನೀಡುತ್ತಿದ್ದರೆ ಆ ಕಂಪನಿಗೆ ತೆರಿಗೆ ಕಟ್ಟುವುದರಿಂದ ವಿನಾಯಿತಿ ಲಭಿಸುತ್ತದೆ. ಈಗ ಆಪಾದಿತ ಕಂಪನಿಯ ಮಾಲೀಕ ಇದೇ ಪರಿಚ್ಛೇದವನ್ನು ದುರ್ಬಳಕೆ ಮಾಡಿಕೊಂಡು 880 ಕೋಟಿ ರು. ಆದಾಯ ಮುಚ್ಟಿಟ್ಟು ವಂಚನೆ ಮಾಡಿದ್ದಾನೆ ಎಂಬುದು ದಾಳಿಯಲ್ಲಿ ಪತ್ತೆಯಾಗಿದೆ.
ಈ ಕಂಪನಿಯಲ್ಲಿ ಮಾಸಿಕ 25 ಸಾವಿರ ರು.ಗಿಂತ ಹೆಚ್ಚು ವೇತನ ಪಡೆಯುವ ಹಲವಾರು ಉದ್ಯೋಗಿಗಳಿದ್ದಾರೆ. ಆದರೆ ಈ ಉದ್ಯೋಗಿಗಳಿಗೆ 25 ಸಾವಿರಕ್ಕಿಂತ ಕಡಿಮೆ ಸಂಬಳ ನೀಡುತ್ತಿದ್ದೇವೆ ಎಂದು ಕಂಪನಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದೆ. ಈ ಪ್ರಕಾರ, ‘25 ಸಾವಿರ ರು.ಗಿಂತ ಕಮ್ಮಿ ಸಂಬಳ ಪಡೆಯುವ ಇಂತಿಷ್ಟುನೌಕರರು ನಮ್ಮಲ್ಲಿ ಇದ್ದು, ಸಂಬಳದ ಮೇಲೆ 80ಜೆಜೆಎಎ ಅಡಿ ತೆರಿಗೆ ವಿನಾಯಿತಿ ಕೊಡಿ’ ಎಂದು ಆದಾಯ ತೆರಿಗೆ ಇಲಾಖೆಗೆ ಕೋರಿಕೆ ಸಲ್ಲಿಸಿ ನೂರಾರು ಕೋಟಿ ರುಪಾಯಿ ತೆರಿಗೆ ಕಟ್ಟದೇ ಉಳಿಸಿಕೊಂಡಿದ್ದು ತಿಳಿದುಬಂದಿದೆ.
ಇದಲ್ಲದೆ, ಇನ್ನೂ ಕೆಲವರು ಈ ಕಂಪನಿಯ ನೌಕರರೇ ಅಲ್ಲದಿದ್ದರೂ, ಅಂಥವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅವರಿಗೂ 25 ಸಾವಿರ ರು.ಗಿಂತ ಕಡಿಮೆ ಸಂಬಳ ನೀಡುತ್ತಿರುವುದಾಗಿ ಇಲಾಖೆಗೆ ಮಾಹಿತಿ ನೀಡಲಾಗಿದೆ. ಹಲವಾರು ವರ್ಷಗಳಿಂದ ಈ ಕೃತ್ಯವನ್ನು ಕಂಪನಿ ಎಸಗಿದೆ. ಈ ಮೂಲಕ ನಿಜವಾದ 880 ಕೋಟಿ ರು. ಆದಾಯ ಬಚ್ಚಿಟ್ಟು, ಅಷ್ಟುಆದಾಯಕ್ಕೆ ತೆರಿಗೆ ಇಲಾಖೆಗೆ ತೆರಿಗೆ ವಂಚನೆ ಎಸಗಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ತಿಳಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments