Webdunia - Bharat's app for daily news and videos

Install App

ಸಚಿವ ಎಂ.ಬಿ‌.ಪಾಟೀಲ್ ವಿರುದ್ಧ ಬಂಜಾರರ ಆಕ್ರೋಶ

Webdunia
ಬುಧವಾರ, 2 ಮೇ 2018 (15:50 IST)
ಸಚಿವ ಎಂ.ಬಿ.ಪಾಟೀಲ್ ಒಬ್ಬ ಮೋಸಗಾರ ಮಾತ್ರವಲ್ಲದೆ ಬಂಜಾರಾ ಸಮಾಜವನ್ನ ವ್ಯವಸ್ಥಿತವಾಗಿ ತುಳಿಯುತ್ತಿದ್ದಾರೆ ಎಂದು ಬಂಜಾರಾ ಕ್ರಾಂತಿ ದಳದ ಅಧ್ಯಕ್ಷ ಶಂಕರ ಚವ್ಹಾಣ ಆರೋಪಿಸಿದ್ದಾರೆ. 
ವಿಜಯಪುರದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಏಕವಚನದಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ಸಚಿವ ಎಂ.ಬಿ.ಪಾಟೀಲ್ ಹೊಂದಾಣಿಕೆ ರಾಜಕೀಯ ಮಾಡುತ್ತಾ ಕಾಂಗ್ರೆಸ್ ಮಾತ್ರವಲ್ಲದೇ ಇನ್ನಿತರ ‌ಪ್ರಮುಖ ಪಕ್ಷಗಳಲ್ಲಿಯೂ ನಾನೇ ಸುಪ್ರೀಂ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದರು.
 
 ಬಂಜಾರ ಸಮಾಜದವರ ಮತ ಪಡೆದು, ಬಳಸಿಕೊಂಡು ಗೆದ್ದು ಸಚಿವರಾಗುವತನಕ ಅಧಿಕಾರ ಅನುಭವಿಸಿ ಇದೀಗ ನಮ್ಮ ಸಮಾಜದವರನ್ನು ರಾಜಕೀಯವಾಗಿ ನಿರ್ನಾಮ ಮಾಡುತ್ತಾ, ಅಧಿಕಾರಿಗಳನ್ನೂ ಸೇವೆ ಸಲ್ಲಿಸದಂತೆ ತಡೆದು ಬಂಜಾರ ಸಮಾಜಕ್ಕೆ ಅನ್ಯಾಯವೆಸಗುತ್ತಿದ್ದಾರೆ ಎಂದು ಆರೋಪಿಸಿದರು. 
 
ಬಬಲೇಶ್ವರ ‌ಮತಕ್ಷೇತ್ರದಲ್ಲಿ ಬಂಜಾರ ಸಮಾಜದ ಜನತೆ ಅವರನ್ನ ವಿರೋಧಿಸಿ ಬಿಜೆಪಿಯನ್ನ ಬೆಂಬಲಿಸುವ ಮೂಲಕ ಅಧಿಕಾರದ ದರ್ಪದಲ್ಲಿರುವ ಎಂ.ಬಿ.ಪಾಟೀಲರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments