ಸ್ಥಳೀಯ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ!

Webdunia
ಬುಧವಾರ, 14 ಜುಲೈ 2021 (11:42 IST)
ನವದೆಹಲಿ/ಬೆಂಗಳೂರು, (ಜು.13): ಬ್ಯಾಂಕಿಂಗ್ ಪರೀಕ್ಷೆಗಳು ಸ್ಥಳೀಯ ಭಾಷೆಯಲ್ಲಿ ಬರೆಯುವ ವಿಚಾರವಾಗಿ ಕೇಂದ್ರ ಹಣಕಾಸು ಸಚಿವೆ  ನಿರ್ಮಾಲ ಸೀತಾರಾಮನ್ ಅವರನ್ನ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದರು.
ಇಂದು (ಮಂಗಳವಾರ) ನದೆಹಲಿಯಲ್ಲಿ ಭೇಟಿ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬ್ಯಾಂಕಿಂಗ್ ಪರೀಕ್ಷೆಗಳನ್ನು (IBPS)  ಸ್ಥಳೀಯ ಭಾಷೆಗಳಲ್ಲಿಯೇ ನಡೆಸುವ ಕುರಿತು ಚರ್ಚೆ ಮಾಡಿದರು.


ಈ ವೇಳೆ ನಿರ್ಮಲಾ ಸೀತಾರಾಮನ್ ಅವರು ಒಂದು ಸಮಿತಿ ರಚಿಸುವುದಾಗಿ  ಭರವಸೆ ನೀಡಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
* ಬ್ಯಾಂಕಿಂಗ್ ಪರೀಕ್ಷೆಗಳು ಸ್ಥಳೀಯ ಭಾಷೆಯಲ್ಲಿ ಬರೆಯುವ ವಿಚಾರ
* ಕೇಂದ್ರ ಹಣಕಾಸು ಸಚಿವೆ ನಿರ್ಮಾಲ ಸೀತಾರಾಮನ್ ಭೇಟಿಯಾದ ಸಚಿವ ಪ್ರಹ್ಲಾದ್ ಜೋಶಿ
 * ಬ್ಯಾಂಕಿಂಗ್ ಪರೀಕ್ಷೆಗಳನ್ನು (IBPS) ಸ್ಥಳೀಯ ಭಾಷೆಗಳಲ್ಲಿಯೇ ನಡೆಸುವ ಕುರಿತು ಚರ್ಚೆ

ಸಿದ್ದು ಕಿಡಿ
ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಅವರ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments