Webdunia - Bharat's app for daily news and videos

Install App

ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ : ಸುಪ್ರೀಂ

Webdunia
ಗುರುವಾರ, 19 ಮೇ 2022 (07:23 IST)
ಬೆಂಗಳೂರು : ರಾಜ್ಯದಲ್ಲೀಗ ಬಿಬಿಎಂಪಿ ಚುನಾವಣೆಯದ್ದೇ ದೊಡ್ಡ ತಲೆನೋವಾಗಿ ಹೋಗಿದೆ.

ಒಂದ್ಕಡೆ ಚುನಾವಣೆ ನಡೆಸೋಕೆ ಒತ್ತಡ ಹೇರ್ತಿದ್ರೆ, ಮತ್ತೊಂದ್ಕಡೆ ಚುನಾವಣೆ ಮುಂದೂಡಲು ಸರ್ಕಾರ ಪ್ರಯತ್ನಿಸ್ತಿದ್ಯಾ ಎಂಬ ಮಾತು ಕೇಳಿ ಬರುತ್ತಿದೆ.

ಈ ಮಧ್ಯೆ ಸುಪ್ರೀಂಕೋರ್ಟ್ ತನ್ನ ಮರು ಆದೇಶದಲ್ಲೂ, ಹಾಲಿ ಓಬಿಸಿ ನೀತಿಯಡಿ ಚುನಾವಣೆ ನಡೆಸಬೇಕು. ಯಾವುದೇ ಕುಂಟುನೆಪ ಹೇಳಿ ಚುನಾವಣೆ ಮುಂದೂಡಬಾರದು ಎಂದಿದೆ. ಈ ಹಿಂದಿನ ಆದೇಶ ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರವು ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತನ್ನ ಹಿಂದಿನ ಆದೇಶ ಎತ್ತಿ ಹಿಡಿದಿದೆ. ನಿಖರ ಅಂಕಿ ಅಂಶಗಳ ಆಧಾರದ ಮೇಲೆ ಪರಿಶೀಲನೆ ನಡೆಸಬೇಕು. ಆ ಬಳಿಕವೇ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದ ಜನರಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. 

ಹಾಲಿ ಮೀಸಲಾತಿ ಅನ್ವಯವೇ 1 ವಾರದಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್ ಮರು ಆದೇಶದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments