ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ : ಸುಪ್ರೀಂ

Webdunia
ಗುರುವಾರ, 19 ಮೇ 2022 (07:23 IST)
ಬೆಂಗಳೂರು : ರಾಜ್ಯದಲ್ಲೀಗ ಬಿಬಿಎಂಪಿ ಚುನಾವಣೆಯದ್ದೇ ದೊಡ್ಡ ತಲೆನೋವಾಗಿ ಹೋಗಿದೆ.

ಒಂದ್ಕಡೆ ಚುನಾವಣೆ ನಡೆಸೋಕೆ ಒತ್ತಡ ಹೇರ್ತಿದ್ರೆ, ಮತ್ತೊಂದ್ಕಡೆ ಚುನಾವಣೆ ಮುಂದೂಡಲು ಸರ್ಕಾರ ಪ್ರಯತ್ನಿಸ್ತಿದ್ಯಾ ಎಂಬ ಮಾತು ಕೇಳಿ ಬರುತ್ತಿದೆ.

ಈ ಮಧ್ಯೆ ಸುಪ್ರೀಂಕೋರ್ಟ್ ತನ್ನ ಮರು ಆದೇಶದಲ್ಲೂ, ಹಾಲಿ ಓಬಿಸಿ ನೀತಿಯಡಿ ಚುನಾವಣೆ ನಡೆಸಬೇಕು. ಯಾವುದೇ ಕುಂಟುನೆಪ ಹೇಳಿ ಚುನಾವಣೆ ಮುಂದೂಡಬಾರದು ಎಂದಿದೆ. ಈ ಹಿಂದಿನ ಆದೇಶ ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರವು ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತನ್ನ ಹಿಂದಿನ ಆದೇಶ ಎತ್ತಿ ಹಿಡಿದಿದೆ. ನಿಖರ ಅಂಕಿ ಅಂಶಗಳ ಆಧಾರದ ಮೇಲೆ ಪರಿಶೀಲನೆ ನಡೆಸಬೇಕು. ಆ ಬಳಿಕವೇ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದ ಜನರಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. 

ಹಾಲಿ ಮೀಸಲಾತಿ ಅನ್ವಯವೇ 1 ವಾರದಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್ ಮರು ಆದೇಶದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಅಜಿತ್ ಪವಾರ್ ದುರಂತ ಸಾವಿನ ಹಿಂದೆ ಏನೋ ಇದೆ ಎಂದ ಮಮತಾ ಬ್ಯಾನರ್ಜಿ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

ಮುಂದಿನ ಸುದ್ದಿ
Show comments