Webdunia - Bharat's app for daily news and videos

Install App

ಇಂದಿನಿಂದ 1ರಿಂದ 5ನೇ ತರಗತಿ ಆರಂಭ

Webdunia
ಸೋಮವಾರ, 25 ಅಕ್ಟೋಬರ್ 2021 (08:48 IST)
ಬೆಂಗಳೂರು : ಸುಮಾರು ಎರಡು ವರ್ಷಗಳ ನಂತರ ಕರ್ನಾಟದಲ್ಲಿ 1ರಿಂದ 5ನೇ ತರಗತಿವರೆಗಿನ ಶಾಲೆಗಳು ಮತ್ತೆ ಆರಂಭವಾಗುತ್ತಿದ್ದು, ಶಾಲೆಗೆ ಹೊರಡುವ ಸಂಭ್ರಮ ಮಕ್ಕಳಿರುವ ಮನೆಗಳಲ್ಲಿ ಮನೆಮಾಡಿದೆ.
ಹಲವು ಮನೆಗಳಲ್ಲಿ ನಿನ್ನೆಯಿಂದಲೇ ಸಿದ್ಧತೆಗಳು ಆರಂಭವಾಗಿದ್ದು, ‘ಮಕ್ಕಳಿಗೂ ಲಸಿಕೆ ಹಾಕಿಸಿದ ನಂತರವೇ ಶಾಲೆ ಆರಂಭಿಸಿದ್ದರೆ ಒಳ್ಳೆಯದಿತ್ತು’ ಎಂದು ಕೆಲ ಪೋಷಕರು ಬಲವಾಗಿ ಪ್ರತಿಪಾದಿಸಿದರು. ‘ಮನೆಯಲ್ಲಿ ನಾವು ಎಷ್ಟು ಹೇಳಿದರೂ ಮಕ್ಕಳು ಕೇಳುವುದಿಲ್ಲ. ಮಗ್ಗಿ ಕೂಡ ಮರೆತಿದ್ದಾರೆ ಶಾಲೆ ಆರಂಭವಾಗಿದ್ದು ಒಳ್ಳೆಯದಾಯ್ತು’ ಎಂದು ಹಲವು ಪೋಷಕರು ಶಾಲೆ ಆರಂಭಿಸುವ ತೀರ್ಮಾನವನ್ನು ಬೆಂಬಲಿಸಿದ್ದರು.
ಮಾರ್ಗಸೂಚಿ ವಿವರ
ರಾಜ್ಯದಲ್ಲಿ 1ರಿಂದ 5ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಿರುವ ಸರ್ಕಾರ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. 20 ತಿಂಗಳ ನಂತರ ರಾಜ್ಯದಲ್ಲಿ ಕಿರಿಯ ಪ್ರಾಥಮಿಕ ಶಾಲೆಗಳು ಆರಂಭವಾಗುತ್ತಿದ್ದು, 3ನೇ ಹಂತದಲ್ಲಿ 1ರಿಂದ 5ನೇ ತರಗತಿ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಅಕ್ಟೋಬರ್ 30ರವರೆಗೆ ಅರ್ಧದಿನ ಮಾತ್ರ ತರಗತಿ ನಡೆಯಲಿದೆ. ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ, ಶನಿವಾರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿ ನಡೆಸಬೇಕು ಎಂದು ಸರ್ಕಾರ ಸೂಚಿಸಿದ್ದು, ನವೆಂಬರ್ 2ರಿಂದ ಪೂರ್ಣಾವಧಿ ತರಗತಿಗಳು ಅಂದರೆ, ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯಲಿವೆ.
ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯ. ಅ.30ರವರೆಗೆ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನ.2ರಿಂದ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ ತರಬೇಕು. ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಒಂದು ಕೊಠಡಿಯಲ್ಲಿ 15-20 ಮಕ್ಕಳ ತಂಡ ರಚಿಸಿ ಪಾಠ. ಶಾಲೆ ಗೇಟ್ ಬಳಿ ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಡ್ಡಾಯ. ಯಾವುದೇ ಮಕ್ಕಳಲ್ಲಿ ಕೊರೊನಾ ಕಂಡುಬಂದರೆ ಶಾಲೆಯನ್ನು ಸ್ಯಾನಿಟೈಸ್ ಮಾಡಬೇಕು. ಮುಂದಿನ ಆದೇಶದವರೆಗೆ ಎಲ್ಕೆಜಿ, ಯುಕೆಜಿ ಆರಂಭಿಸುವಂತಿಲ್ಲ. ಶಿಕ್ಷಕರು, ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ಶಿಕ್ಷಕರು 2 ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯ. 50 ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್ಶೀಲ್ಡ್ ಧರಿಸಬೇಕು ಎಂದು ಸರ್ಕಾರ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments