ಕಾವೇರಲಿದೆ ಬೆಳಗಾವಿ ಅಧಿವೇಶನ !

Webdunia
ಬುಧವಾರ, 22 ಡಿಸೆಂಬರ್ 2021 (08:42 IST)
ಬೆಳಗಾವಿ : ಇಂದು ಕೂಡ ಬೆಳಗಾವಿ ಅಧಿವೇಶನ ಕಾವೇರಲಿದೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಸಂಬಂಧ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ.
 
ವಿಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ನಿನ್ನೆ ಮಸೂದೆ ಮಂಡಿಸಿದೆ. ಇಂದು ಮಸೂದೆ ಕುರಿತ ಚರ್ಚೆಗೆ ಅವಕಾಶ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದೂ ‘ಮತಾಂತರ’ ಅಲ್ಲೋಲಕಲ್ಲೋಲ ನಡೆಯಲಿದೆ. ಇತ್ತ ಬಲವಂತದ ಮಾತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ.

ಇಂದಿನ ಚರ್ಚೆಯಲ್ಲಿ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ಕೆಡ ಕಾರಲು ಸಿದ್ಧರಾಗಿದ್ದಾರೆ. ಹಿಡನ್ ಅಜೆಂಡಾವನ್ನು ಬೆತ್ತಲೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದ್ರೆ, ರಾಜ್ಯದ ಶಾಂತಿ ಕೆಡಸಲು ಇದೊಂದು ಪ್ರಯತ್ನ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರವಾಗಿ ಆರೋಪಿಸಿದ್ದಾರೆ. 

ರಾಜ್ಯದಲ್ಲಿ ಅಶಾಂತಿ ಮೂಡಿಸಲು. ರಾಜಕೀಯವಾಗಿ ಕೆಲ ವಿಷಯಗಳನ್ನ ವಿಷಯಾಂತರ ಮಾಡಲು ಈ ವಿಚಾರವನ್ನು ಸರ್ಕಾರ ಮುನ್ನೆಲೆಗೆ ತಂದಿದೆ. 21 ಸಚಿವರ ಮಕ್ಕಳು, ಮೊಮ್ಮಕ್ಕಳು ಕ್ರಿಶ್ಚಿಯನ್ ಸ್ಕೂಲ್ನಲ್ಲಿ ಓದುತ್ತಿದ್ದಾರೆ. ಸದನದಲ್ಲಿ ಮಸೂದೆಯ ಪ್ರತಿಯನ್ನು ಸಹ ಡಿಕೆಶಿ ಹರಿದು ಹಾಕಿದ್ರು. ಈ ವಿಚಾರವಾಗಿ ಸದನ ಇಂದೂ ಕಾವೇರುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

RajyaSabha Election: ಕರ್ನಾಟಕದಿಂದ ರಾಜ್ಯಸಭೆಗೆ ಸರ್ವಾನುಮತದಿಂದ ಆಯ್ಕೆಯಾದ ಅಭ್ಯರ್ಥಿಗಳು ಇವರೇ

ರಸ್ತೆ ಅಪಘಾತದಲ್ಲಿ ಟಾಪ್ 5 ರಾಜ್ಯಗಳಲ್ಲಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ

ಅಮ್ಮನನ್ನು ಎತ್ತಿಕೊಂಡು ಹೋದ ತಂದೆ, ಅದನ್ನು ನೋಡಿ ಮಗ ಏನ್ ಮಾಡಿದ ಗೊತ್ತಾ, Video

ಹಡಗುಗಳ ಮೇಲಿನ ದಾಳಿಗೆ ಖಡಕ್ ಕೌಂಟರ್ ಕೊಟ್ಟ ಭಾರತ

ಮುಂದಿನ ಸುದ್ದಿ
Show comments