Webdunia - Bharat's app for daily news and videos

Install App

ಕಾವೇರಲಿದೆ ಬೆಳಗಾವಿ ಅಧಿವೇಶನ !

Webdunia
ಬುಧವಾರ, 22 ಡಿಸೆಂಬರ್ 2021 (08:42 IST)
ಬೆಳಗಾವಿ : ಇಂದು ಕೂಡ ಬೆಳಗಾವಿ ಅಧಿವೇಶನ ಕಾವೇರಲಿದೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಸಂಬಂಧ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ.
 
ವಿಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ನಿನ್ನೆ ಮಸೂದೆ ಮಂಡಿಸಿದೆ. ಇಂದು ಮಸೂದೆ ಕುರಿತ ಚರ್ಚೆಗೆ ಅವಕಾಶ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದೂ ‘ಮತಾಂತರ’ ಅಲ್ಲೋಲಕಲ್ಲೋಲ ನಡೆಯಲಿದೆ. ಇತ್ತ ಬಲವಂತದ ಮಾತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ.

ಇಂದಿನ ಚರ್ಚೆಯಲ್ಲಿ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ಕೆಡ ಕಾರಲು ಸಿದ್ಧರಾಗಿದ್ದಾರೆ. ಹಿಡನ್ ಅಜೆಂಡಾವನ್ನು ಬೆತ್ತಲೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದ್ರೆ, ರಾಜ್ಯದ ಶಾಂತಿ ಕೆಡಸಲು ಇದೊಂದು ಪ್ರಯತ್ನ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರವಾಗಿ ಆರೋಪಿಸಿದ್ದಾರೆ. 

ರಾಜ್ಯದಲ್ಲಿ ಅಶಾಂತಿ ಮೂಡಿಸಲು. ರಾಜಕೀಯವಾಗಿ ಕೆಲ ವಿಷಯಗಳನ್ನ ವಿಷಯಾಂತರ ಮಾಡಲು ಈ ವಿಚಾರವನ್ನು ಸರ್ಕಾರ ಮುನ್ನೆಲೆಗೆ ತಂದಿದೆ. 21 ಸಚಿವರ ಮಕ್ಕಳು, ಮೊಮ್ಮಕ್ಕಳು ಕ್ರಿಶ್ಚಿಯನ್ ಸ್ಕೂಲ್ನಲ್ಲಿ ಓದುತ್ತಿದ್ದಾರೆ. ಸದನದಲ್ಲಿ ಮಸೂದೆಯ ಪ್ರತಿಯನ್ನು ಸಹ ಡಿಕೆಶಿ ಹರಿದು ಹಾಕಿದ್ರು. ಈ ವಿಚಾರವಾಗಿ ಸದನ ಇಂದೂ ಕಾವೇರುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments