Webdunia - Bharat's app for daily news and videos

Install App

ಜುಲೈ 27ರಂದು ಬಂದ್ ಆಗುತ್ತಾ ಬೆಂಗಳೂರು?

Webdunia
ಮಂಗಳವಾರ, 25 ಜುಲೈ 2023 (13:03 IST)
ಬೆಂಗಳೂರು : ಇದೇ 27ಕ್ಕೆ ಆಟೋ, ಟ್ಯಾಕ್ಸಿ, ಕ್ಯಾಬ್ ಹಾಗೂ ಖಾಸಗಿ ಬಸ್ ಸಂಘಟನೆಗಳು ಬಂದ್ಗೆ ಕರೆಕೊಟ್ಟಿವೆ. ಸರ್ಕಾರದ ಶಕ್ತಿಯೋಜನೆಯಿಂದ ಹೊಟ್ಟೆಗೆ ತಣ್ಣೀರು ಬಟ್ಟೆ ಬಿದ್ದಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳು ಆರೋಪಿಸಿವೆ. ಹೀಗಾಗಿ ಸರ್ಕಾರ ಸಂಘಟನೆಗಳ ಮನವೊಲಿಕೆಗೆ ಮುಂದಾಗಿದೆ.

ಸರ್ಕಾರದ ಶಕ್ತಿಯೋಜನೆ ಅದ್ಭುತವಾಗಿ ಯಶಸ್ಸು ಕಂಡಿದೆ. ಇದರಿಂದ ಪ್ರತಿಕೂಲ ಪರಿಣಾಮ ಎದುರಿಸುತ್ತಿರುವ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್ ಮಾಲೀಕರು ಇದೀಗ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಈ ಹಿನ್ನೆಲೆ ಜುಲೈ 27ಕ್ಕೆ 23 ಸಂಘಟನೆಗಳು ಸೇರಿದ ಖಾಸಗಿ ಸಾರಿಗೆ ಒಕ್ಕೂಟ ಸಾಮೂಹಿಕವಾಗಿ ಬಂದ್ ಆಚರಸಿ ಸರ್ಕಾರಕ್ಕೆ ಪ್ರತಿರೋಧ ಒಡ್ಡಲು ಮುಂದಾಗಿದೆ. ಜುಲೈ 27ಕ್ಕೆ ಬೆಂಗಳೂರಲ್ಲಿ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್ ಗಳನ್ನು ರಸ್ತೆಗೆ ಇಳಿಸದೆ ಮುಷ್ಕರ ಮಾಡಲು ಮುಂದಾಗಿತ್ತು. ಆದರೆ ಇದರ ಮಹತ್ವ ಅರಿತುಕೊಂಡಿರುವ ಸರ್ಕಾರ ಖಾಸಗಿ ಸಾರಿಗೆ ಒಕ್ಕೂಟಗಳ ಮನವೊಲಿಕೆಗೆ ಮುಂದಾಗಿದೆ.

ಖಾಸಗಿ ಸಾರಿಗೆ ಇಲಾಖೆ ಜುಲೈ 27ಕ್ಕೆ ಬಂದ್ಗೆ ಕರೆ ಕೊಟ್ಟಿರುವ ಹಿನ್ನೆಲೆ ಇಂದು ಸಾರಿಗೆ ಇಲಾಖೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಭೆ ಕರೆದಿದ್ದಾರೆ. ಇಂದಿನ ಸಭೆಯಲ್ಲಿ ಬಂದ್ಗೆ ಕರೆ ಹಾಗೂ ಬೆಂಬಲ ಕೊಟ್ಟಿರುವ ಸಂಘಟನೆಗಳ ಆಹವಾಲು ಸ್ವೀಕರಿಸಲಿದ್ದು, ಆಗುತ್ತಿರುವ ಅನಾನೂಕಲಗಳನ್ನು ಆಲಿಸಲಿದ್ದಾರೆ.ಒಂದು ವೇಳೆ ಇಂದಿನ ಸಭೆ ಯಶಸ್ವಿಯಾದರೆ ಬಂದ್ ವಾಪಾಸ್ ಪಡೆಯುವ ಸಂಭವವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments