Webdunia - Bharat's app for daily news and videos

Install App

ಭಾರತ್ ಬಂದ್; ಬೆಂಗಳೂರಲ್ಲಿ ಸಂಚಾರ ಮಾರ್ಗ ಬದಲು

Webdunia
ಭಾನುವಾರ, 26 ಸೆಪ್ಟಂಬರ್ 2021 (14:03 IST)
ಬೆಂಗಳೂರು, ಸೆ 26 : ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದೆ. ಬೆಂಗಳೂರಿನಲ್ಲಿ ಸಹ ಬಂದ್ಗೆ ಬೆಂಬಲಿಸಿ ಬೃಹತ್ ಜಾಥಾ ನಡೆಸಲಾಗುತ್ತದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ನಿರೀಕ್ಷೆ ಇದೆ.

ಬೆಂಗಳೂರು ಸಂಚಾರಿ ಪೊಲೀಸರು ಸೆಪ್ಟೆಂಬರ್ 27ರಂದು ರೈತರು ಜಾಥಾ ಹಮ್ಮಿಕೊಂಡಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ. ಮೆಜೆಸ್ಟಿಕ್, ಆನಂದ್ ರಾವ್ ವೃತ್ತ, ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ನಡೆಸುವುದನ್ನು ವಾಹನ ಸವಾರರು ಸಂಚಾರ ಮಾರ್ಗ ಬದಲಾವಣೆ ಬಗ್ಗೆ ಮಾಹಿತಿ ತಿಳಿಯುವುದು ಅಗತ್ಯವಾಗಿದೆ.
ಕೆ. ಜಿ. ರಸ್ತೆಯಲ್ಲಿ ಹಲಸೂರು ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ. ಜಿ. ರಸ್ತೆ ಕಡೆಗೆ ಸಾಗುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಹಾಗೆಯೇ ನೃಪತುಂಗ ರಸ್ತೆ ಮೂಲಕ ಬಂದು ಪೊಲೀಸ್ ಕಾರ್ನರ್ ಬಳಿ ಬಲ ತಿರುವು ಪಡೆದು ಕೆ. ಜಿ. ರಸ್ತೆ ಸಾಗುವ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರ್ಯಾಯ ವ್ಯವಸ್ಥೆ; ಹಲಸೂರು ಗೇಟ್ ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ. ಜಿ. ರಸ್ತೆ ಕಡೆಗೆ ಸಾಗುವ ವಾಹನಗಳು ಪೊಲೀಸ್ ಕಾರ್ನರ್ ವೃತ್ತದಿಂದ ನೇರವಾಗಿ ನೃಪತುಂಗ ರಸ್ತೆಗೆ ಪವೇಶ ತೆಗೆದುಕೊಂಡು ನೃಪತುಂಗ ರಸ್ತೆಯಲ್ಲಿ ಸಾಗಿ ಕೆ. ಆರ್. ವೃತ್ತ ತಲುಪಿ ಮುಂದುವರೆಯಲು ಅನುವು ಮಾಡಿಕೊಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments