Select Your Language

Notifications

webdunia
webdunia
webdunia
webdunia

ಕೃಷಿ ಕಾಯ್ದೆ ವಿರೋಧಿಸಿ ಸೆ.27 ರಂದು `ಭಾರತ್ ಬಂದ್' : ಬೊಮ್ಮಾಯಿ ಹೇಳಿದ್ದೇನು?

ಕೃಷಿ ಕಾಯ್ದೆ ವಿರೋಧಿಸಿ ಸೆ.27 ರಂದು `ಭಾರತ್ ಬಂದ್' : ಬೊಮ್ಮಾಯಿ ಹೇಳಿದ್ದೇನು?
ಬೆಂಗಳೂರು , ಶನಿವಾರ, 25 ಸೆಪ್ಟಂಬರ್ 2021 (12:21 IST)
ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆ. 27 ಕ್ಕೆ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ ಸಾರ್ವಜನಿಕರಿಗೆ ಯಾವ ತೊಂದರೆಯಾಗದಂತೆ ರಕ್ಷಣೆ ನೀಡಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಈಗ ಕಡಿಮೆಯಾಗುತ್ತಿದೆ. ಈಗ ತಾನೆ ಕೋವಿಡ್ ನಿಂದ ಜನರು ಹೊರಗಡೆ ಬಂದಿದ್ದಾರೆ. ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಚಟುವಟಿಕೆಗಳು ಈಗ ಆರಂಭವಾಗುತ್ತಿವೆ ಎಂದರು.
ಭಾರತ್ ಬಂದ್ ಗೆ ನಾನ್ಯಾಕೆ ಪ್ರತಿಕ್ರಿಯೆ ನೀಡಬೇಕು ಎಂದ ಸಿಎಂ ಬೊಮ್ಮಾಯಿ, ಬೇರೆ ಬೇರೆ ವೃತ್ತಿಯಲ್ಲಿ ಈಗಷ್ಟೇ ಕೆಲಸ ಶುರುವಾಗಿದೆ. ಅವರಿಗೆ ಯಾವುದೇ ರೀತಿ ತೊಂದರೆ ಆಗದಂತೆ ರಕ್ಷಣೆ ನೀಡಲಾಗುವುದು ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದಸರಾ ಮಹೋತ್ಸವಕ್ಕೆ ದಿನಗಣನೆ; ಅರಮನೆ ಪ್ರವೇಶ ದರ ಏರಿಕೆ ಶಾಕ್!