Webdunia - Bharat's app for daily news and videos

Install App

ಜಮ್ಮು ಕಾಶ್ಮೀರದಲ್ಲಿ ಸರ್ಕಾರ ಮುರಿದುಬೀಳುವುದರ ಹಿಂದೆ ದೊಡ್ಡ ಸೀಕ್ರೆಟ್!

Webdunia
ಗುರುವಾರ, 21 ಜೂನ್ 2018 (09:42 IST)
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಖತಂಗೊಳಿಸಿ ಸಮ್ಮಿಶ್ರ ಸರ್ಕಾರಕ್ಕೆ ಗುಡ್ ಬೈ ಹೇಳಿದಾಗ ಏನೋ ಬಲವಾದ ಕಾರಣವಿರಲೇಬೇಕು ಎಂಬ ಅನುಮಾನ ಎಲ್ಲರಲ್ಲೂ ಮೂಡಿತ್ತು.

ಅದೀಗ ನಿಜವಾಗುವ ಲಕ್ಷಣ ಕಾಣುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಭಾರೀ ಪ್ಲ್ಯಾನ್ ರೂಪಿಸಿದೆ ಎಂಬ ವದಂತಿಗೆ ಇದೀಗ ಸೇನಾ ಮುಖ್ಯಸ್ಥರ ಹೇಳಿಕೆ ಪುಷ್ಠಿ ನೀಡಿದೆ.

ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರುವ ಮೂಲಕ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ಮಾಡುವ ಕೇಂದ್ರ ನಾಯಕರ ಯೋಜನೆಗೆ ಸ್ಪಷ್ಟ ರೂಪ ಸಿಗುತ್ತಿದೆ. ಇಲ್ಲಿ ಸೈನಿಕರ ಮೇಲೆಯೇ ಕಲ್ಲೆಸೆತ, ಉಗ್ರರ ಉಪಟಳ ಹೆಚ್ಚಳವಾದ ಹಿನ್ನಲೆಯಲ್ಲಿ ಪೊಲೀಸರು ಮತ್ತು ಸೇನೆ ಜಂಟಿಯಾಗಿ ಕಾರ್ಯಾಚರಣೆಗಿಳಿಯಲಿದೆ ಎನ್ನಲಾಗಿದೆ.

ಇದಕ್ಕಾಗಿಯೇ ರಾಜ್ಯಪಾಲರ ಆಡಳಿತ ಹೇರಲಾಗಿದೆ. ರಾಜ್ಯಪಾಲ ಎನ್ ಎನ್ ವೋಹ್ರಾ ಅಧಿಕಾರ ಸ್ವೀಕರಿಸುತ್ತಿದ್ದಂತೇ ಉಗ್ರರ ವಿರುದ್ಧ ಶೀಘ್ರವೇ ಸೇನಾ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ತಿಳಿಸಿದ್ದಾರೆ. ಹೀಗಾಗಿ ಉಗ್ರರ ಮಟ್ಟ ಹಾಕುವುದಕ್ಕೆ ನೇರವಾಗಿ ಕೇಂದ್ರವೇ ಇಂತಹದ್ದೊಂದು ಯೋಜನೆ ರೂಪಿಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments