Webdunia - Bharat's app for daily news and videos

Install App

ಶಾಪಿಂಗ್ ಪ್ರಿಯರಿಗೆ ಬಿಗ್ ಶಾಕ್

Webdunia
ಗುರುವಾರ, 30 ಸೆಪ್ಟಂಬರ್ 2021 (11:55 IST)
ಬೆಂಗಳೂರು : ಸಿಲಿಕಾನ್ ಸಿಟಿಯ ಜನಪ್ರಿಯ ಶಾಪಿಂಗ್ ಸೆಂಟರ್ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿದೆ. ಆಸ್ತಿ ತೆರಿಗೆ ಬಾಕಿ ಹಾಗೂ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.
Photo Courtesy: Google

ಮಂತ್ರಿಮಾಲ್ ನಿಂದ 39 ಕೋಟಿ ರೂಪಾಯಿ ತೆರಿಗೆ ಪಾವತಿ ಬಾಕಿ ಇದ್ದು, 2017ರಿಂದ ತೆರಿಗೆ ಪಾವತಿಸದೇ ವಂಚನೆ ಎಸಗಲಾಗಿದೆ. ಹಲವು ಬಾರಿ ನೋಟೀಸ್ ನೀಡಿದರೂ ತೆರಿಗೆ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಮಂತ್ರಿಮಾಲ್ ಗೆ ಬೀಗ ಜಡಿದಿರುವ ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ನೇತೃತ್ವದ ಅಧಿಕಾರಿಗಳು, ಶಾಪಿಂಗ್ ಗೆ ಬಂದ ಜನರನ್ನು ವಾಪಸ್ ಕಳುಹಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಆಯುಕ್ತ ಶಿವಸ್ವಾಮಿ, 39 ಕೋಟಿ ತೆರಿಗೆ ಬಾಕಿಯಲ್ಲಿ ಕನಿಷ್ಟ 5 ಕೋಟಿ ರೂಪಾಯಿಯನ್ನು ತಕ್ಷಣ ಪಾವತಿ ಮಾಡಿದಲ್ಲಿ ಮಾಲ್ ತೆರೆಯಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಸದ್ಯಕ್ಕೆ ಮಾಲ್ ಗೆ ಬೀಗ ಹಾಕಲಾಗಿದ್ದು, ಮಾರ್ಷಲ್ ಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments