ಸಮ್ಮಿಶ್ರ ಸರ್ಕಾರಕ್ಕೆ ಬಿಗ್ ಶಾಕ್! ಬಿಜೆಪಿ ಸೇರಲು ಸಿದ್ಧರಾಗಿರುವ 11 ಶಾಸಕರು?!

Webdunia
ಮಂಗಳವಾರ, 29 ಮೇ 2018 (13:15 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ತಲೆನೋವಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಮತ್ತೊಂದು ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಶಾಕ್ ಸಿಕ್ಕಿದೆ.

ಕಾಂಗ್ರೆಸ್  ಮತ್ತು ಜೆಡಿಎಸ್ ನ ಇಬ್ಬರು ಶಾಸಕರು ಸೇರಿದಂತೆ ಒಟ್ಟು 11 ಶಾಸಕರು ಮೈತ್ರಿ ಸರ್ಕಾರಕ್ಕೆ ಕೈ ಕೊಡಲು ಸಿದ್ಧರಾಗಿದ್ದಾರೆ ಎನ್ನಲಾಗಿದ್ದು, ಈ ಶಾಸಕರೆಲ್ಲಾ ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ಗುಪ್ತಚರ ಇಲಾಖೆ ಸಿಎಂ ಕುಮಾರಸ್ವಾಮಿಗೆ ವರದಿ ನೀಡಿದೆ.

ಈ ಹಿನ್ನಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಈ ಶಾಸಕರಿಗೆ ಮಣೆ ಹಾಕುವ ನಿರೀಕ್ಷೆಯಿದೆ. ಈ ಮೂಲಕ ಇವರು ಪಕ್ಷ ಬಿಟ್ಟು ಹೋಗದಂತೆ ತಡೆಯುವ ಪ್ರಯತ್ನ ನಡೆಸಬಹುದು. ಇಲ್ಲವಾದರೆ ಮೈತ್ರಿ ಸರ್ಕಾರ ಉರುಳಿ ಬೀಳುವುದು ಖಚಿತವಾಗಲಿದೆ.

ರಾಜಶೇಖರ ಪಾಟೀಲ್, ಬಿಸಿ ಪಾಟೀಲ್, ಆನಂದ್ ಸಿಂಗ್, ಕಂಪ್ಲಿ ಶಾಸಕ ಗಣೇಶ್, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ಬಿ ಕೆ ಸಂಗಮೇಶ್ ಮುಂತಾದ ಶಾಸಕರು ಗುಪ್ತಚರ ಇಲಾಖೆಯ ವರದಿಯ ಪಟ್ಟಿಯಲ್ಲಿರುವ ಶಾಸಕರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments