Daily Horoscope

ಐದು ಗ್ಯಾರಂಟಿ ಜಾರಿಗೆ ಅಬಕಾರಿ ಇಲಾಖೆಗೆ ಬಿಗ್ ಟಾರ್ಗೆಟ್!

Webdunia
ಮಂಗಳವಾರ, 20 ಜೂನ್ 2023 (08:03 IST)
ಬೆಂಗಳೂರು : ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿರುವ ಸಿದ್ದರಾಮಯ್ಯ ಸರ್ಕಾರ ಈಗ ಆರ್ಥಿಕ ಸಂಪನ್ಮೂಲಗಳನ್ನು ಹೊಂದಿಸಲು ಪ್ರಯತ್ನ ಮಾಡುತ್ತಿದ್ದು, ಅಬಕಾರಿ ಇಲಾಖೆಗೆ ಈ ಬಾರಿ ಬಿಗ್ ಟಾರ್ಗೆಟ್ ನೀಡಲು ಸರ್ಕಾರ ಮುಂದಾಗಿದೆ.

ಈ ಹಣಕಾಸು ವರ್ಷದಲ್ಲಿ 40 ಸಾವಿರ ಕೋಟಿ ರೂ.ಆದಾಯ ಸಂಗ್ರಹದ ಟಾರ್ಗೆಟ್ ನೀಡಲು ಸಿದ್ದತೆ ನಡೆಸಿದೆ. ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಅಬಕಾರಿ ಇಲಾಖೆಯಿಂದ 35 ಸಾವಿರ ಕೋಟಿ ಗುರಿ ನೀಡಲಾಗಿತ್ತು.

 ಇದೇ ವೇಳೆ ಆಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಮಾಡುವ ಸುಳಿವನ್ನು ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ನೀಡಿದ್ದಾರೆ. ಶೀಘ್ರವೇ ಆಸ್ತಿ ಮಾರ್ಗಸೂಚಿ ದರ ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. 

2018 ರಿಂದ ಕರ್ನಾಟಕದಲ್ಲಿ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಆಗಿಲ್ಲ. ಇದರಿಂದ ರೈತರಿಗೂ, ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ. ಶೀಘ್ರವೇ ಮಾರುಕಟ್ಟೆ ದರಕ್ಕೆ ತಕ್ಕಂತೆ ಮಾರ್ಗಸೂಚಿ ದರ ಬದಲಾವಣೆ ಮಾಡುತ್ತೇವೆ ಎಂದಿದ್ದಾರೆ.

ಆದಾಯ ಸಂಗ್ರಹದ ಟಾರ್ಗೆಟ್ ಯಾವ ಇಲಾಖೆಗೆ ಎಷ್ಟು ಎನ್ನುವುದು ಜುಲೈನಲ್ಲಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ನಲ್ಲಿ ತಿಳಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments