ಹೆಣದ ಮೇಲೆ ಬಿಜೆಪಿ ರಾಜಕೀಯ ಮಾಡ್ತಿದೆ ಎಂದ ಕೈ ಮುಖಂಡ

Webdunia
ಶನಿವಾರ, 2 ಮಾರ್ಚ್ 2019 (15:28 IST)
ಬೇರೆಯವರ ಹೆಣದ ಮೇಲೆ ರಾಜಕೀಯ ಮಾಡೋದು, ನಮ್ಮ ಸೀಟ್ ಹೆಚ್ಚಿಗೆ ಬರ್ತಾವೆ ಎಂದು ಬಿಜೆಪಿಯವರು ಹೇಳೋದು ಸರಿಯಲ್ಲ ಅಂತ ಕಾಂಗ್ರೆಸ್ ಹಿರಿಯ ಮುಖಂಡ ಖಂಡಿಸಿದ್ದಾರೆ.

ಕೇಂದ್ರದ ಹಿಂದಿನ ಸರ್ಕಾರ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿರಲಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಮೋದಿಯ ಪ್ರತಿ ಮಾತಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ.

ಚುನಾವಣೆ ವೇಳೆ ಇಂತಹ ಮಾತುಗಳಿಂದ ರಾಜಕೀಯವಾಗಿ ಬಳಸ್ತಿದಾರೆ ಎಂದು ಸ್ಪಷ್ಟವಾಗುತ್ತದೆ. ಬಿ.ಎಸ್.ಯಡಿಯೂರಪ್ಪ ಸಹ ಇದರ ಪರಿಣಾಮ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳಿಕೆ ಕೊಟ್ಟರು.
ಅವರ ಬಾಯಲ್ಲಿ ಇಂತಹ ಮಾತು ಹೊರಬೀಳುತ್ತದೆ ಎಂದ್ರೆ ಪಕ್ಷದಲ್ಲಿ ಈ ಬಗ್ಗೆ ಚರ್ಚೆಯಾಗ್ತಿದೆ ಎಂದೇ ಅರ್ಥ ಅಂತ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೇರೆಯವರ ಹೆಣದ ಮೇಲೆ ರಾಜಕೀಯ ಮಾಡೋದು, ನಮ್ಮ ಸೀಟ್ ಹೆಚ್ಚಿಗೆ ಬರ್ತಾವೆ ಎಂಬುದು ಸರಿಯಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ ಅವರು, ಪಾಕ್ ಸೇನೆಯಿಂದ ನಿರಂತವಾಗಿ ಅಪ್ರಚೋದಿತ ಗುಂಡಿನ ದಾಳಿಯಾಗುತ್ತಿದೆ.  ಪಿಒಕೆ ಮತ್ತು ನಮ್ಮ ಗಡಿ ಭಾಗದಲ್ಲಿ ಮೊದಲಿನಿಂದಲೂ ದಾಳಿ ಮಾಡ್ತಿದಾರೆ. ನಮ್ಮ ಇಂಟೆಲಿಜೆನ್ಸ್ ಗಂಭೀರ ಚಿಂತನೆ ಮಾಡಿ ದೇಶಕ್ಕೆ ಒಳ್ಳೆಯದಾಗುವ ನಿರ್ಣಯ ಕೈಗೊಳ್ಳಬೇಕು. ಸೈನಿಕರು ಅಲರ್ಟ್ ಆಗಿದ್ದು, ಪಾಕ್ ಸೇನೆಗೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ. ಅಭಿನಂದನ್ ವಾಪಸ್ ಆಗಿದ್ದನ್ನು ಸ್ವಾಗತಿಸುತ್ತೇವೆ ಎಂದು ಕಲಬುರಗಿಯಲ್ಲಿ ಖರ್ಗೆ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಛತ್ತೀಸ್‌ಗಢ ಖದೀಮರ ಕೈಚಳಕ್ಕೆ ನಗರವೇ ಶಾಕ್‌, ಆಗಿದ್ದೇನು ಎಲ್ಲಿ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಮುಂದಿನ ಸುದ್ದಿ
Show comments