Webdunia - Bharat's app for daily news and videos

Install App

ಕೈ ನಾಯಕನಿಗೆ ಬಿಜೆಪಿ ಗಾಳ: ವೇದಿಕೆ ಸಜ್ಜು

Webdunia
ಭಾನುವಾರ, 1 ಏಪ್ರಿಲ್ 2018 (14:23 IST)
ಕೊಪ್ಪಳದ ಕಾಂಗ್ರೇಸಿನ ಪ್ರಭಾವಿ ಮುಖಂಡ ಹಾಗೂ ಕುರುಬ ಸಮುದಾಯದ ಪ್ರಭಾವಿ ನಾಯಕ ಮಾಜಿಸಚಿವ ಸಾಲೋಣಿ ನಾಗಪ್ಪ ಇದೀಗ ಬಿಜೆಪಿ ಸೆರ್ಪಡೆಯಾಗಲು ವೇದಿಕೆ ಸಿದ್ದವಾಗಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಕೊಪ್ಪಳದ ಸಂಸದ ಕರಡಿ ಸಂಗಣ್ಣ ನೇತೃತ್ವದಲ್ಲಿ ಬಿಜೆಪಿ ನಾಯಕರು ಸಾಲೋಣಿ ನಾಗಪ್ಪರವರ ಮನೆಗೆ ಭೇಟಿ ನೀಡಿ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಸಾಲೋಣಿ ನಾಗಪ್ಪ ಸಹ ಸಹಮತ ವ್ಯಕ್ತಪಡಿಸಿದ್ದು, ಇದೇ 5 ಅಥವಾ 6 ತಾರೀಖಿನಂದು ಬಿಜೆಪಿ ಸೆರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
 
 ಇನ್ನು ಕನಕಗಿರಿ ಕ್ಷೇತ್ರದಲ್ಲಿ ಕುರುಬ ಸಮುದಾಯ ಮತಗಳು ಅತಿಹೆಚ್ಚು ಇರೋದ್ರಿಂದ ಒಂದು ವೇಳೆ ಸಾಲೋಣಿ ನಾಗಪ್ಪ ಬಿಜೆಪಿ ಸೆರ್ಪಡೆಯಾದ್ರೆ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಕೊಡಲಿದೆ. ಸಾಲೋಣಿ ನಾಗಪ್ಪ ಬಿಜೆಪಿಗೆ ಆಗಮನದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಗೊಂಡಿದ್ದು, ಬಿಜೆಪಿ ಅಭ್ಯರ್ಥಿ ದಡೆಸೂಗೂರು ಬಸವರಾಜಗೆ ಪ್ಲಸ್ ಪಾಯಿಂಟ್ ಆಗಲಿದೆ.  
 
ಸಾಲೋಣಿ ನಾಗಪ್ಪ ಕೆಲದಿನಗಳಿಂದ ಶಾಸಕ ಶಿವರಾಜ ತಂಗಡಗಿ ವಿರುದ್ದ ಅಸಮಾಧಾನಗೊಂಡಿದ್ರು. ಇದ್ರಿಂದ ಸಹಜವಾಗಿಯೇ ಶಾಸಕ ಶಿವರಾಜ್ ತಂಗಡಗಿಗೆ ತಲೆನೋವಾಗಿ ಪರಿಣಮಿಸಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments