Select Your Language

Notifications

webdunia
webdunia
webdunia
webdunia

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮೈಸೂರು ಅರಮನೆಗೆ ಭೇಟಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮೈಸೂರು ಅರಮನೆಗೆ ಭೇಟಿ
ಮೈಸೂರು , ಶುಕ್ರವಾರ, 30 ಮಾರ್ಚ್ 2018 (13:38 IST)
ಮೈಸೂರು ಅರಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭೇಟಿ ನೀಡಿದ್ದಾರೆ. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಒಡೆಯರ್ ಜೊತೆ ಮಾತುಕತೆ ನಡೆಸಿದ್ದಾರೆ. 
ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಈ ಮಾತುಕತೆ ನಡೆದಿದೆ. 10 ಮಂದಿ ಬಿಜೆಪಿ ನಾಯಕರೊಂದಿಗೆ ಅರಮನೆಗೆ ಅಮೀತ್ ಷಾ ಭೇಟಿ ನೀಡಿರುವುದು ಚುನಾವಣಾ ಸಂದರ್ಭದಲ್ಲಿ ಮಹತ್ವ ಪಡೆದುಕೊಂಡಿದೆ. 
 
ಈಗಾಗಲೇ ರಾಜಕೀಯಕ್ಕೆ ಬರುವುದಿಲ್ಲ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ. ಅದರ ನಡುವೆಯೇ ಬಿಜೆಪಿ ಪರ ಪ್ರಚಾರಕ್ಕೆ ಯದುವೀರ್ ಅವರನ್ನು  ಆಹ್ವಾನಿಸುವ ಸಾಧ್ಯತೆ ಹಿನ್ನಲೆಯಲ್ಲಿ ಭೇಟಿ ನೀಡಲಾಗಿದೆ ಎನ್ನಲಾಗುತ್ತಿರುವುದು ರಾಜ್ಯದ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ. 
 
ಪ್ರಮೋದಾದೇವಿ ಒಡೆಯರ್, ಯದುವೀರ್ ಒಡೆಯರ್ ಅವರೊಂದಿಗೆ ಅರ್ಧ ಗಂಟೆಗಳ ಕಾಲ ಮಾತುಕತೆಯನ್ನು ಅಮಿತ್ ಷಾ ಅಂಡ್ ಟೀಮ್ ನಡೆಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಂ.ಬಿ.ಪಾಟೀಲ್‌ರನ್ನು ಖಡ್ಗದಿಂದ ಕತ್ತರಿಸುತ್ತೇನೆ ಎಂದ ಬಿಜೆಪಿ ನಾಯಕಿ ವಿರುದ್ಧ ದೂರು ದಾಖಲು