ಇಂದಿನಿಂದ ಎರಡು ದಿನ ಬೆಂಗಳೂರಿನಲ್ಲಿ ಪ್ರವಾಸ ಮಾಡಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

Webdunia
ಬುಧವಾರ, 18 ಏಪ್ರಿಲ್ 2018 (06:33 IST)
ಬೆಂಗಳೂರು : ಇಂದಿನಿಂದ ಎರಡು ದಿನ (ಬುಧವಾರ ಹಾಗೂ ಗುರುವಾರ ) ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರವಾಸ ಮಾಡಲಿದ್ದಾರೆ.


ಬಸವ ಜಯಂತಿ ಪ್ರಯುಕ್ತ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರವಾಸ ಆರಂಭಿಸಲಿರುವ ಅಮಿತ್ ಶಾ ಅವರು ನವಕರ್ನಾಟಕ ಜನಪರ ಶಕ್ತಿ ಕಾರ್ಯಕ್ರಮದ ಎರಡನೇ ಹಂತದಲ್ಲಿ ಮನೆಮನೆಗೆ ಹೋಗಿ ಅಭಿಪ್ರಾಯ ಪಡೆಯಲಿದ್ದಾರೆ. ಹಾಗೇ ಶಕ್ತಿಕೇಂದ್ರ ಪ್ರಮುಖರ ಸಭೆ, ರೋಡ್ ಶೋ, ಪದಾಧಿಕಾರಿಗಳ ಸಭೆ ಹಾಗೂ ವಿವಿಧ ಕ್ಷೇತ್ರದ ಗಣ್ಯರ ಜತೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.


ಇದಲ್ಲದೇ ಇಂದು ಅಮಿತ್ ಶಾ ಅವರು ಚುನಾವಣೆಯಲ್ಲಿ ರಾಜ್ಯದ ಜನರ ಮನಸ್ಸನ್ನು ತಮ್ಮತ್ತ ಒಲಿಸಿಕೊಳ್ಳುವುದು ಹೇಗೆ? ಯಾವ ವಯಸ್ಸಿನವರನ್ನು ಹೇಗೆ ಸೆಳೆಯಬಹುದು? ಮಕ್ಕಳನ್ನು ಇಷ್ಟಪಡಿಸುವುದು ಹೇಗೆ? ಯಾವ ಸಮಯದಲ್ಲಿ ಎಲ್ಲಿ ಪ್ರಚಾರ ಮಾಡಿದರೆ ಯಾರನ್ನು ಒಲಿಸಿಕೊಳ್ಳಬಹುದು ಇತ್ಯಾದಿ ವಿಚಾರಗಳ ಬಗ್ಗೆ ರಾಜ್ಯದ ನಾಯಕರು ಮತ್ತು ಕಾರ್ಯಕರ್ತರಿಗೆ ಪಾಠ ಮಾಡಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments