Webdunia - Bharat's app for daily news and videos

Install App

ಇಂದಿನಿಂದ ಎರಡು ದಿನ ಬೆಂಗಳೂರಿನಲ್ಲಿ ಪ್ರವಾಸ ಮಾಡಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

Webdunia
ಬುಧವಾರ, 18 ಏಪ್ರಿಲ್ 2018 (06:33 IST)
ಬೆಂಗಳೂರು : ಇಂದಿನಿಂದ ಎರಡು ದಿನ (ಬುಧವಾರ ಹಾಗೂ ಗುರುವಾರ ) ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರವಾಸ ಮಾಡಲಿದ್ದಾರೆ.


ಬಸವ ಜಯಂತಿ ಪ್ರಯುಕ್ತ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರವಾಸ ಆರಂಭಿಸಲಿರುವ ಅಮಿತ್ ಶಾ ಅವರು ನವಕರ್ನಾಟಕ ಜನಪರ ಶಕ್ತಿ ಕಾರ್ಯಕ್ರಮದ ಎರಡನೇ ಹಂತದಲ್ಲಿ ಮನೆಮನೆಗೆ ಹೋಗಿ ಅಭಿಪ್ರಾಯ ಪಡೆಯಲಿದ್ದಾರೆ. ಹಾಗೇ ಶಕ್ತಿಕೇಂದ್ರ ಪ್ರಮುಖರ ಸಭೆ, ರೋಡ್ ಶೋ, ಪದಾಧಿಕಾರಿಗಳ ಸಭೆ ಹಾಗೂ ವಿವಿಧ ಕ್ಷೇತ್ರದ ಗಣ್ಯರ ಜತೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.


ಇದಲ್ಲದೇ ಇಂದು ಅಮಿತ್ ಶಾ ಅವರು ಚುನಾವಣೆಯಲ್ಲಿ ರಾಜ್ಯದ ಜನರ ಮನಸ್ಸನ್ನು ತಮ್ಮತ್ತ ಒಲಿಸಿಕೊಳ್ಳುವುದು ಹೇಗೆ? ಯಾವ ವಯಸ್ಸಿನವರನ್ನು ಹೇಗೆ ಸೆಳೆಯಬಹುದು? ಮಕ್ಕಳನ್ನು ಇಷ್ಟಪಡಿಸುವುದು ಹೇಗೆ? ಯಾವ ಸಮಯದಲ್ಲಿ ಎಲ್ಲಿ ಪ್ರಚಾರ ಮಾಡಿದರೆ ಯಾರನ್ನು ಒಲಿಸಿಕೊಳ್ಳಬಹುದು ಇತ್ಯಾದಿ ವಿಚಾರಗಳ ಬಗ್ಗೆ ರಾಜ್ಯದ ನಾಯಕರು ಮತ್ತು ಕಾರ್ಯಕರ್ತರಿಗೆ ಪಾಠ ಮಾಡಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments