Webdunia - Bharat's app for daily news and videos

Install App

ದೇವೇಗೌಡರ ‘ಕುಟುಂಬ ನಿಯೋಗ’ಕ್ಕೆ ಬಿಜೆಪಿ ವ್ಯಂಗ್ಯ

Webdunia
ಶನಿವಾರ, 6 ಅಕ್ಟೋಬರ್ 2018 (09:09 IST)
ಬೆಂಗಳೂರು: ಕೊಡಗು ಪ್ರವಾಹ ಪರಿಹಾರ, ಮೇಕೆದಾಟು ಯೋಜನೆಗೆ ಬೆಂಬಲ ಸೇರಿದಂತೆ ಹಲವು ವಿಚಾರಗಳಲ್ಲಿ ಕೇಂದ್ರದ ಸಹಕಾರ ಕೋರಲು ರಾಜ್ಯ ಸರ್ಕಾರದ ನಿಯೋಗ ಕೇಂದ್ರ ಗೃಹಸಚಿವರನ್ನು ಭೇಟಿ ಮಾಡಿದ್ದು ನಿಮಗೆ ಗೊತ್ತೇ ಇದೆ.

ಆದರೆ ಈ ನಿಯೋಗದಲ್ಲಿ ದೇವೇಗೌಡರ ಕುಟುಂಬವೇ ಇದ್ದಿದ್ದನ್ನು ನೋಡಿ ರಾಜ್ಯ ಬಿಜೆಪಿ ಟ್ವಿಟರ್ ಮೂಲಕ ವ್ಯಂಗ್ಯ ಮಾಡಿದೆ. ಇದು ದೇವೇಗೌಡರ ಕುಟಂಬದ ನಿಯೋಗ ಎಂದು ಲೇವಡಿ ಮಾಡಿದೆ. ರಾಜ್ಯ ನಿಯೋಗದಲ್ಲಿ ದೇವೇಗೌಡರ ಜತೆಗೆ ಸಿಎಂ ಕುಮಾರಸ್ವಾಮಿ, ಸಹೋದರ ಎಚ್ ಡಿ ರೇವಣ್ಣ ರಾಜನಾಥ್ ಸಿಂಗ್ ರನ್ನು ಭೇಟಿ ಮಾಡಿದ ಫೋಟೋ ಪ್ರಕಟಿಸಿ ಬಿಜೆಪಿ ವ್ಯಂಗ್ಯ ಮಾಡಿದೆ.

‘ಕರ್ನಾಟಕ ಸರ್ಕಾರ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದೆ. ಈಗ ನಿಮಗೆ ಗೊತ್ತಾಗಿರಬಹುದು ಯಾರು ಸರ್ಕಾರ ನಡೆಸುತ್ತಿರುವವರು ಎಂದು. ಮಿತ್ರ ಪಕ್ಷದ ಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದು ನೀವೇ ನೋಡಿ’ ಎಂದು ಕಾಂಗ್ರೆಸ್ ಸದಸ್ಯರಿಲ್ಲದೇ ಇರುವುದನ್ನು ಪ್ರಸ್ತಾಪಿಸಿ ಪರೋಕ್ಷವಾಗಿ ಟಾಂಗ್ ಕೊಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments