Select Your Language

Notifications

webdunia
webdunia
webdunia
Saturday, 12 April 2025
webdunia

ಕೆಪಿಸಿಸಿ ಸಂಪರ್ಕಕ್ಕೆ ಸಿಗದ ನಾಲ್ವರು ಶಾಸಕರು! ಬಿಜೆಪಿಗೆ ನಾಲ್ವರು ಶಾಸಕರ ಬೆಂಬಲ?

ಕರ್ನಾಟಕ ಚುನಾವಣೆ
ಬೆಂಗಳೂರು , ಬುಧವಾರ, 16 ಮೇ 2018 (09:44 IST)
ಬೆಂಗಳೂರು: ಅತ್ತ ಕಾಂಗ್ರೆಸ್ ಜೆಡಿಎಸ್ ಜತೆ ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದ್ದರೆ, ಇತ್ತ ಬಿಜೆಪಿ ಕಾಂಗ್ರೆಸ್ ನ ನಾಲ್ವರು ಶಾಸಕರಿಗೆ ಗಾಳ ಹಾಕಿದೆ ಎನ್ನಲಾಗಿದೆ.

ಬಿಜೆಪಿಯಿಂದ ವಲಸೆ ಹೋಗಿ ಕಾಂಗ್ರೆಸ್ ಸೇರಿಕೊಂಡಿರುವ ಶಾಸಕರಾದ ಆನಂದ್ ಸಿಂಗ್, ಅಮರೇಗೌಡ ಬಯ್ಯಾಪುರ, ಎಂವೈ ಪಾಟೀಲ್, ಭೀಮಾ ನಾಯ್ಕ್ ರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸುತ್ತಿದೆ.

ಸರ್ಕಾರ ರಚಿಸಲು ಕೊನೆಯ ಕ್ಷಣದ ಕಸರತ್ತು ನಡೆಸುತ್ತಿರುವ ಬಿಜೆಪಿ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ನ ಅತೃಪ್ತ ಶಾಸಕರಿಗೆ ಗಾಳ ಹಾಕುತ್ತಿದೆ. ಈ ಶಾಸಕರು ಕೆಪಿಸಿಸಿ ಸಂಪರ್ಕಕ್ಕೆ ಸಿಗದೇ ಇರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಡ್ರಾಮಾ ಬಾಕಿ ಇದೆ ಎನ್ನುವುದು ಸ್ಪಷ್ಟವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಯಾರಿಗೆಲ್ಲಾ ಕರೆ ಮಾಡಿದ್ರು ಪಟ್ಟಿ ಕೊಡ್ತೇನೆ: ಡಿಕೆಶಿ