ಅಧಿಕಾರ ಬೇಕು ಆದರೆ ಕೆಟ್ಟವರಾಗಲು ಬಿಜೆಪಿ ಬಯಸಲ್ಲ!

Webdunia
ಬುಧವಾರ, 19 ಸೆಪ್ಟಂಬರ್ 2018 (08:58 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ವಿದ್ಯಮಾನಗಳಿಗೆ ಬಿಜೆಪಿ ಆಪರೇಷನ್ ಕಮಲ್ ಇಫೆಕ್ಟ್ ಎಂದು ಕಾಂಗ್ರೆಸ್-ಜೆಡಿಎಸ್ ಆರೋಪಿಸುತ್ತಿವೆ. ಆದರೆ ಬಿಜೆಪಿ ಬಹಿರಂಗವಾಗಿ ಇದನ್ನು ನಿರಾಕರಿಸುತ್ತಲೇ ತೆರೆ ಮರೆಯಲ್ಲಿ ತನ್ನ ಪ್ರಯತ್ನ ಮುಂದುವರಿಸಿದೆ.

ಬಹಿರಂಗವಾಗಿ ಆಪರೇಷನ್ ಕಮಲಕ್ಕೆ ಮುಂದಾದರೆ ಪಕ್ಷಕ್ಕೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಬಹುದು ಮತ್ತು ಪಕ್ಷದ ಘನತೆಗೆ ಕುತ್ತಾಗಬಹುದು ಎಂಬ ಕಾರಣಕ್ಕೆ ಬಿಜೆಪಿ ನಾಯಕರು ಇದನ್ನು ಬಹಿರಂಗವಾಗಿ ನಿರಾಕರಿಸುತ್ತಲೇ ಇದ್ದಾರೆ.

ಆದರೆ ತೆರೆಮರೆಯಲ್ಲಿ ದೋಸ್ತಿ ಪಕ್ಷಗಳ ನಡೆ ನೋಡಿಕೊಂಡು ತನ್ನ ಗಾಳ ಹಾಕಲು ಕಾಯುವಿಕೆಯ ತಂತ್ರಕ್ಕೆ ಮೊರೆ ಹೋಗಿದೆ. ರಾಜ್ಯದ ವಿದ್ಯಮಾನಗಳ ಬಗ್ಗೆ ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ರಾಜ್ಯ ನಾಯಕರು ನಿರಂತರವಾಗಿ ಮಾಹಿತಿ ಕೊಡುತ್ತಲೇ ಇದ್ದಾರೆ. ಯಾವುದೇ ಕಾರಣಕ್ಕೂ ಅಪವಾದ ಹೊತ್ತುಕೊಂಡು ಅಧಿಕಾರಕ್ಕೆ ಏರದಂತೆ ರಾಷ್ಟ್ರೀಯ ನಾಯಕರ ಸೂಚನೆಯಿದೆ. ಹೀಗಾಗಿ ಬಿಜೆಪಿ ತಾಳ್ಮೆಯ ಆಟವಾಡಲು ನಿರ್ಧರಿಸಿದಂತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments