Webdunia - Bharat's app for daily news and videos

Install App

ಬೊಮ್ಮಾಯಿ ಕೊನೆಯ ಬಜೆಟ್ ಮಂಡನೆ : ನಿರೀಕ್ಷೆಗಳೇನು?

Webdunia
ಶುಕ್ರವಾರ, 17 ಫೆಬ್ರವರಿ 2023 (08:50 IST)
ಬೆಂಗಳೂರು : ಚುನಾವಣೆ ಸನಿಹದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಶುಕ್ರವಾರ ಮಂಡನೆಯಾಗಲಿದೆ. ವಿಧಾನಸಭೆಯಲ್ಲಿ ನಾಳೆ ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಎರಡನೇ ಬಜೆಟ್ ಮಂಡಿಸಲಿದ್ದಾರೆ.

ಚುನಾವಣೆ ಸನಿಹದಲ್ಲಿ ಇರುವುದರಿಂದ ಈ ಬಜೆಟ್ ಸಹಜವಾಗಿಯೇ ಜನಪ್ರಿಯತೆಯ ಹಳಿ ಮೇಲೆ ಸಾಗುವ ನಿರೀಕ್ಷೆ ಇದೆ.

ಉಚಿತ ಘೋಷಣೆ ಒಳಗೊಂಡಂತೆ, ಜನತೆಗೆ ತೆರಿಗೆ ಹೊರೆ ಇಲ್ಲದ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಪ್ಲಾನ್ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್-ಜೆಡಿಎಸ್ಗೆ ಟಕ್ಕರ್ ಕೊಟ್ಟು, ಮತ ಫಸಲು ತೆಗೆಯುವುದಕ್ಕೆ ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ಮೂಲಕ ಪ್ರಯತ್ನಿಸಲಿದ್ದಾರೆ. 

ಬಜೆಟ್ ನಿರೀಕ್ಷೆಗಳೇನು?

ಕಾಂಗ್ರೆಸ್ನ ಗೃಹ ಲಕ್ಷ್ಮಿ ಯೋಜನೆಗೆ ಪ್ರತಿಯಾಗಿ ಸ್ತ್ರೀಶಕ್ತಿ ಯೋಜನೆ, ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯ 5 ಲಕ್ಷ ರೂ.ಗೆ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲದ ಮೊತ್ತ ಹೆಚ್ಚಳ ಸಾಧ್ಯತೆ,

ಕುಲ ಕಸುಬುಗಳ ಪ್ರೋತ್ಸಾಹಕ್ಕೆ ವಿಶೇಷ ಯೋಜನೆ, ಹೋಬಳಿ ಮಟ್ಟದಲ್ಲೂ ನಮ್ಮ ಕ್ಲಿನಿಕ್ ಅನುಷ್ಠಾನ, ಬೆಂಗಳೂರು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್, ವಿವಿಧ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ;

ಅನುದಾನ, ನೀರಾವರಿ ಯೋಜನೆಗಳಿಗೆ ಹೆಚ್ಚು ಹಣ ಮೀಸಲು, ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಅನುಷ್ಠಾನ, ಪುನೀತ್ ರಾಜ್ಕುಮಾರ್, ಅಂಬರೀಶ್ ಸ್ಮಾರಕ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments