Webdunia - Bharat's app for daily news and videos

Install App

ಅನಗತ್ಯ ಖರ್ಚಿಗೆ ಬೊಮ್ಮಾಯಿ ಬ್ರೇಕ್?

Webdunia
ಮಂಗಳವಾರ, 10 ಆಗಸ್ಟ್ 2021 (14:20 IST)
ಬೆಂಗಳೂರು(ಆ.10): ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಅನಗತ್ಯ ಖರ್ಚು ಹೆಚ್ಚಾಗಿ ನಡೆಯುತ್ತದೆ. ಅದೆಷ್ಟೇ ಸರಳ ಕಾರ್ಯಕ್ರಮವಾದರೂ ಹೂವು, ಹಣ್ಣು ಹಂಪಲು, ತುರಾಯಿ ಎಂದು ಹಣ ವ್ಯಯಿಸಲಾಗುತ್ತದೆ. ಆದರೀಗ ಈ ವಿಧಿ ವಿಧಾನಗಳಿಗೆ ಬ್ರೇಕ್ ಹಾಕಿರುವ ಕರ್ನಾಟಕ ಸಿಎಂ ಬೊಮ್ಮಾಯಿ ಎಲ್ಲಾ ಖರ್ಚುಗಳಿಗೆ ತಡೆ ಹಾಕಿದ್ದಾರೆ.

ಹೌದು ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಪ್ರಕಟನೆಯೊಂದನ್ನು ಹೊರಡಿಸಲಾಗಿದ್ದು, ಇದರಲ್ಲಿ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಈ ಮೂಲಕ ನಿರ್ದೇಶಿಸಿದೆ. ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಹೇಳಲಾಗಿದೆ.
ಅಲ್ಲದೇ ಈ ನಿರ್ದೇಶನವನ್ನು ಚಾಚೂ ತಪ್ಪದೇ ಅನುಷ್ಟಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದೆ ಎಂದೂ ಇಲ್ಲಿ ಉಲ್ಲೇಖಿಸಲಾಗಿದೆ.
ಬಸವರಾಜ ಬೊಮ್ಮಾಯಿ ಕರ್ನಾಟಕ ಸಿಎಂ ಆಗಿ ಅಧಿಕಾರ ಸ್ವೀಕರಿಸಿದಾಗಿನಿಂದ ಅನೇಕ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಸದ್ಯ ಸರ್ಕಾರಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಈ ನಿರ್ಧಾರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments