ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಬಿ.ಎಸ್. ಯಡಿಯೂರಪ್ಪ

Webdunia
ಮಂಗಳವಾರ, 29 ಮೇ 2018 (07:30 IST)
ಬೆಂಗಳೂರು : ನಾನು ಕರ್ನಾಟಕದ ಜನರ ಮುಲಾಜಿನಲ್ಲಿಲ್ಲ ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಬಿ.ಎಸ್. ಯಡಿಯೂರಪ್ಪ ಅವರು ಈ ಹೇಳಿಕೆ ನಾಡಿನ ಜನತೆಗೆ ಮಾಡಿದ ಅಪಚಾರ. ಹೀಗಾಗಿ ಅವರು ಯಾವ ಮುಲಾಜು ಇಲ್ಲದೆ ಜನರ ಕ್ಷಮೆಯಾಚಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಕುಮಾರಸ್ವಾಮಿ ಕನ್ನಡ ಜನತೆಯ ಕ್ಷಮೆ ಯಾಚಿಸಬೇಕು. ಅವರು ಕನ್ನಡ ನಾಡಿನ ಜನತೆ ಸೇವೆಗಾಗಿ ಸಿಎಂ ಆಗಿದ್ದಾರೆ ಹೊರತು ಕಾಂಗ್ರೆಸ್ ಸೇವೆಗಾಗಿ ಅಲ್ಲ ಎನ್ನುವುದನ್ನು ನಾನು ಅವರಿಗೆ ನೆನಪಿಸಲು ಬಯಸುತ್ತೇನೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಮುಖ್ಯಮಂತ್ರಿಯಾಗಿರಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.


‘ರೈತರ ಸಾಲಮನ್ನಾಸಂಬಂಧ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಅವರು ಸಾಲಮನ್ನಾಗೆ ಒಂದು ವಾರದ ಕಾಲಾವಧಿ ಕೇಳಿದ್ದಾರೆ. ಒಂದು ವಾರ ಕಾಯುತ್ತೇವೆ, ಬಳಿಕ ಮತ್ತೆ ಹೋರಾಟ ನಡೆಸಲಿದ್ದೇವೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments