Webdunia - Bharat's app for daily news and videos

Install App

ಬಿಜೆಪಿ ಸೇರಲು ಬಿಎಸ್ ವೈಯಿಂದ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಓಪನ್ ಆಫರ್

Webdunia
ಶನಿವಾರ, 30 ಜೂನ್ 2018 (08:56 IST)
ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದ ಶಾಸಕರಲ್ಲಿ ಉಂಟಾಗಿರುವ ಅಸಮಾಧಾನದ ಲಾಭವೆತ್ತಲು ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಓಪನ್ ಆಫರ್ ನೀಡಿದ್ದಾರೆ.


ಬಿಜೆಪಿ ಪಕ್ಷ ಬಲವರ್ಧನೆ ಮಾಡಲು ಬಯಸಿ ಜೆಡಿಎಸ್-ಕಾಂಗ್ರೆಸ್ ಶಾಸಕರು ಬರಲು ಸಿದ್ಧವಾದರೆ ಅವರಿಗೆ ಸ್ವಾಗತ ಎಂದು ಬಿಎಸ್ ವೈ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಆಹ್ವಾನವಿತ್ತಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ನ ಕೆಲವು ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ. ಪಕ್ಷದ ಬಲವರ್ಧನೆ ಮಾಡಲು ಮನಸ್ಸಿರುವ ಶಾಸಕರು ಬರಬಹುದು ಎಂದು ಬಿಎಸ್ ವೈ ಹೇಳಿದ್ದಾರೆ. ಈ ಮೂಲಕ ಅವಕಾಶ ಸಿಕ್ಕರೆ ಮತ್ತೆ ವಿರೋಧಿ ಪಾಳಯದ ಶಾಸಕರ ಬೆಂಬಲದೊಂದಿಗೆ ಅಧಿಕಾರಕ್ಕೇರುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ. ಅಂತೂ ಬಿಎಸ್ ವೈ ನೀಡಿರುವ ಈ ಹೇಳಿಕೆ ಹಲವು ಕುತೂಹಲಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments