Select Your Language

Notifications

webdunia
webdunia
webdunia
webdunia

ತಮ್ಮದೇ ಸರ್ಕಾರದವರನ್ನು ತೃಪ್ತಿಪಡಿಸದವರು ಜನರಿಗೆ ಹೇಗೆ ನಮ್ಮದಿ ಕೊಡುತ್ತಾರೆ? ಬಿಎಸ್ ವೈ ಟಾಂಗ್

ತಮ್ಮದೇ ಸರ್ಕಾರದವರನ್ನು ತೃಪ್ತಿಪಡಿಸದವರು ಜನರಿಗೆ ಹೇಗೆ ನಮ್ಮದಿ ಕೊಡುತ್ತಾರೆ? ಬಿಎಸ್ ವೈ ಟಾಂಗ್
ಬೆಂಗಳೂರು , ಶುಕ್ರವಾರ, 13 ಜುಲೈ 2018 (09:07 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಬಗ್ಗೆ ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ಸೇ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವಾಗ ಬೇರೆಯವರು ಹೇಗೆ ಸಮಾಧಾನ ಪಟ್ಟುಕೊಳ್ಳಲು ಸಾಧ‍್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಟ್ವಿಟರ್ ನಲ್ಲಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿರುವ ಬಿಎಸ್ ವೈ ‘ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರೇ ಬಜೆಟ್ ನ್ನು ಒಂದು ಜೋಕ್ ಎಂದಿದ್ದಾರೆ. ಸಿಎಂ ಕುಮಾರಸ್ವಾಮಿಯವರು ತಮ್ಮ ಸರ್ಕಾರದಲ್ಲಿರುವವರಿಗೇ ಒಪ್ಪಿಸಲು ಸಾಧ್ಯವಾಗಿಲ್ಲಅಂದರೆ ರಾಜ್ಯದ ಜನ ಹೇಗೆ ಅವರ ಬಜೆಟ್ ನ್ನು ಒಪ್ಪಿಕೊಳ‍್ಳುತ್ತಾರೆ?’ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದ ಬಳಿಕ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದು ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಿದ ಬಗ್ಗೆ ಮತ್ತು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಸರಿಯಲ್ಲ ಎಂದು ಪತ್ರ ಬರೆದು ನಿರ್ಧಾರ ಮರುಪರಿಶೀಲಿಸಲು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಬಿಎಸ್ ವೈ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಪಿಜಿ ಸಬ್ಸಿಡಿ ದರವನ್ನು ಶೇ. 60 ಹೆಚ್ಚಿಸಿದ ಕೇಂದ್ರ ಸರ್ಕಾರ