ತಮ್ಮದೇ ಸರ್ಕಾರದವರನ್ನು ತೃಪ್ತಿಪಡಿಸದವರು ಜನರಿಗೆ ಹೇಗೆ ನಮ್ಮದಿ ಕೊಡುತ್ತಾರೆ? ಬಿಎಸ್ ವೈ ಟಾಂಗ್

Webdunia
ಶುಕ್ರವಾರ, 13 ಜುಲೈ 2018 (09:07 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಬಗ್ಗೆ ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ಸೇ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವಾಗ ಬೇರೆಯವರು ಹೇಗೆ ಸಮಾಧಾನ ಪಟ್ಟುಕೊಳ್ಳಲು ಸಾಧ‍್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಟ್ವಿಟರ್ ನಲ್ಲಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿರುವ ಬಿಎಸ್ ವೈ ‘ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರೇ ಬಜೆಟ್ ನ್ನು ಒಂದು ಜೋಕ್ ಎಂದಿದ್ದಾರೆ. ಸಿಎಂ ಕುಮಾರಸ್ವಾಮಿಯವರು ತಮ್ಮ ಸರ್ಕಾರದಲ್ಲಿರುವವರಿಗೇ ಒಪ್ಪಿಸಲು ಸಾಧ್ಯವಾಗಿಲ್ಲಅಂದರೆ ರಾಜ್ಯದ ಜನ ಹೇಗೆ ಅವರ ಬಜೆಟ್ ನ್ನು ಒಪ್ಪಿಕೊಳ‍್ಳುತ್ತಾರೆ?’ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದ ಬಳಿಕ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದು ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಿದ ಬಗ್ಗೆ ಮತ್ತು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಸರಿಯಲ್ಲ ಎಂದು ಪತ್ರ ಬರೆದು ನಿರ್ಧಾರ ಮರುಪರಿಶೀಲಿಸಲು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಬಿಎಸ್ ವೈ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments