Webdunia - Bharat's app for daily news and videos

Install App

ಬಜೆಟ್ ಮಂಡನೆ : ಗರಿಗೆದರಿದ ಹಲವು ನಿರೀಕ್ಷೆಗಳು

Webdunia
ಶುಕ್ರವಾರ, 7 ಜುಲೈ 2023 (11:09 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇಯ ಇಂದು ಬಜೆಟ್ ಮಂಡನೆ ಮಾಡುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗರಲ್ಲಿ ಹಲವು ನಿರೀಕ್ಷೆಗಳು ಹುಟ್ಟಿಕೊಂಡಿವೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು `ಬ್ರ್ಯಾಂಡ್ ಬೆಂಗಳೂರು’ ಬಿಲ್ಡ್ ಗೆ ಉತ್ಸುಕತೆ ತೋರಿದ್ದಾರೆ. ಡಿಕೆಶಿ ನಗರಾಭಿವೃದ್ಧಿ ಖಾತೆ ವಹಿಸಿಕೊಂಡಿರೋ ಹಿನ್ನಲೆಯಲ್ಲಿ ಡಿಸಿಎಂ ಹೊಸ ಮೆಟ್ರೋ ಮಾರ್ಗಗಳ ಬಗ್ಗೆ ಉತ್ಸಾಹ ತೋರಿಸಿದ್ದಾರೆ. ಹೀಗಾಗಿ ಮೆಟ್ರೋ ನಿಗಮವು ಮೂರು ಮಾರ್ಗಗಳ ಬಗ್ಗೆ ಬೇಡಿಕೆ ಇಟ್ಟಿದ್ದು, ಹೀಗಾಗಿ ಹೊಸ ಮೆಟ್ರೋ ಮಾರ್ಗವನ್ನು ಸಿಎಂ ಇಂದು ಘೋಷಣೆ ಮಾಡ್ತಾರಾ ಎಂಬ ಕುತೂಹಲ ಹುಟ್ಟಿದೆ.

ವೈಟ್ ಫೀಲ್ಡ್ – ಹೊಸಕೋಟೆ 17 ಕಿ.ಮೀ ಮೆಟ್ರೋ ಮಾರ್ಗ, ಒಳ ವರ್ತುಲ ರಸ್ತೆಯಲ್ಲಿ 35 ಕಿ.ಮೀ ಮೆಟ್ರೋ ಮಾರ್ಗ ಹಾಗೂ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಕಾಡುಗೋಡಿ ವರೆಗೆ 25 ಕಿ.ಮೀ ಮಾರ್ಗ ವಿಸ್ತರಣೆ ಮಾಡುವ ನಿರೀಕ್ಷೆ ಇದೆ.

ಬೆಂಗಳೂರು ನಗರಕ್ಕೆ ಹೊಸ ಫ್ಲೈಓವರ್ ಗಳ ನಿರೀಕ್ಷೆಯೂ ಇದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ಹೊಸ ಫ್ಲೈಓವರ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿಂದಿನ ಸರ್ಕಾರ 17 ಹೊಸ ಫ್ಲೈಓವರ್ ಒಪ್ಪಿಗೆ ಸೂಚಿಸಿತ್ತು. ಹೀಗಾಗಿ ಇಂದಿನ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆ ಆಗೋ ಸಾಧ್ಯತೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments